ಪುತ್ರನ ವಿವಾಹ ನಡೆಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದ: ಕುಮಾರಸ್ವಾಮಿ ಟ್ವೀಟ್
Team Udayavani, Apr 17, 2020, 4:12 PM IST
ಬೆಂಗಳೂರು: ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಇಡೀ ಜಗತ್ತು ಕೋವಿಡ್-19 ವೈರಸ್ ಎಂಬ ಮಹಾಮಾರಿಯಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ.
ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ ಮತ್ತು ಮಾದರಿ ಎಂದಿದ್ದಾರೆ.
ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಹೃದಯತುಂಬಿದ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು