H.D. Revanna ಮೇ 13 ರ ವರೆಗೆ ಪರಪ್ಪನ ಅಗ್ರಹಾರದಲ್ಲೇ


Team Udayavani, May 9, 2024, 7:49 PM IST

Revanna 2

ಬೆಂಗಳೂರು: : ಮಹಿಳೆ ಅಪಹರಣ ಪ್ರಕರಣ ದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ)ದಿಂದ ಬಂಧನ ಕ್ಕೊಳಗಾಗಿರುವ ಶಾಸಕ ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 13ಕ್ಕೆ ಮುಂದೂಡಿದೆ. ಹೀಗಾಗಿ ಸೋಮವಾರದ ವರೆಗೆ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಜೈಲು ವಾಸ ಅನುಭವಿಸಬೇಕಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದರೆ, ಎಸ್‌ಐಟಿ ಪರ ವಕೀಲರಾದ ಜಾಯ್ನಾ ಕೊಥಾರಿ 45 ನಿಮಿಷಗಳ ಕಾಲ ವಾದ ಮಂಡಿಸಿದರು. ಒಟ್ಟಾರೆ ಎರಡೂವರೆ ಗಂಟೆಗಳ ಕಾಲ ವಾದ ಮಂಡನೆ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿದ್ದಾರೆ.

ಕಾಲಾವಕಾಶ ಕೇಳಿದ ಎಸ್‌ಐಟಿ ವಕೀಲರು
ರೇವಣ್ಣ ಜಾಮೀನು ಅರ್ಜಿಗೆ ಲಿಖೀತ ಆಕ್ಷೇಪಣೆ ಸಲ್ಲಿಸಿದ್ದೇವೆ. ಇದು ಗಂಭೀರ ಪ್ರಕರಣ ಆಗಿರುವುದರಿಂದ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ಎಸ್‌ಐಟಿ ಪರ ವಕೀಲರಾದ ಜಾಯ್ನಾ ಕೊಥಾರಿ ಕೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು. ಜಾಮೀನು ಪ್ರಕರಣಗಳಲ್ಲಿ ವಿಳಂಬ ಮಾಡುವಂತಿಲ್ಲವೆಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಎಸ್‌ಐಟಿ ಮನವಿ ಯಂತೆ ಮೊದಲು ಮೇ 7ಕ್ಕೆ ಬಳಿಕ, ಮೇ 8ಕ್ಕೆ, ಆ ಮೇಲೆ ಗುರುವಾರಕ್ಕೆ ವಿಚಾರಣೆ ನಿಗದಿಯಾಗಿದೆ. ಹೀಗಾಗಿ ವಾದ ಮಂಡಿಸುವಂತೆ ಕೇಳುತ್ತಿದ್ದೇನೆ ಎಂದರು.

ತನಿಖಾಧಿಕಾರಿ ವರದಿ ಸಲ್ಲಿಸಿಲ್ಲ
ವಿಚಾರಣೆ ಮುಂದೂಡಿದ ಬಳಿಕ ನ್ಯಾಯಾಧೀಶರು, ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ತನಿಖಾಧಿಕಾರಿ ತನ್ನ ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು. ಈ ಕೇಸ್‌ನಲ್ಲಿ ಎಸ್‌ಐಟಿ ತನಿಖೆಯ ವರದಿಯನ್ನು ಯಾಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು.

ಯಾರನ್ನಾದರೂ ಕರೆದೊಯ್ದರೆ ಸಿಎಂ ಬಂಧನ ಆಗುತ್ತದೋ?
ಎಚ್‌.ಡಿ.ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ವಾದ ಮಂಡಿಸಿ, 364ಎ ಯಾರನ್ನಾದರೂ ಅಪಹರಿಸಿ ಒತ್ತೆಯಾಗಿಟ್ಟುಕೊಂಡು ಬೇಡಿಕೆ ಇಟ್ಟ ಕೆಲಸ ಮಾಡದಿದ್ದರೆ ಕೊಲ್ಲುವುದು ಅಥವಾ ಗಾಯಗೊಳಿಸುವುದಾಗಿದೆ. ಉಗ್ರರು ಇಂಡಿಯನ್‌ ಏರ್‌ ಲೈನ್ಸ್‌ ವಿಮಾನ ಅಪಹರಿಸಿ ಒತ್ತೆಯಾಳುಗಳನ್ನು ಬಿಡಲು ಬಿಡುಗಡೆ ಕೋರಿದ್ದರು. ಈ ಘಟನೆ ಬಳಿಕವೇ ಐಪಿಸಿಗೆ ಸೆ.364ಎ ಸೇರಿಸಲಾಯಿತು. ಆದರೆ ಇಲ್ಲಿ ಇಂತಹ ದುಷ್ಕೃತ್ಯ ನಡೆದಿಲ್ಲ. ಅಪಹರಣಕ್ಕೊಳಗಾದ ಮಹಿಳೆ ಅಪ್ರಾಪ್ತ ವಯಸ್ಕಳಲ್ಲ. ನನಗೆ ಸುಳ್ಳು ಹೇಳಿ ನನ್ನ ತಾಯಿಯನ್ನು ಕರೆದೊಯ್ದರೆಂದು ಮಗ ದೂರು ನೀಡಿ¨ªಾನೆ. ಆದರೆ ತಾಯಿಗೆ ಸುಳ್ಳು ಹೇಳಿ ವಂಚಿಸಿ ಎಳೆದೊಯ್ದ ಆರೋಪವಿಲ್ಲ. ರೇವಣ್ಣ ಸಾಹೇಬರು ಹೇಳಿ¨ªಾರೆಂದು ಕರೆದೊಯ್ದರೆಂದು ದೂರಿನಲ್ಲಿದೆ. ಹಾಗಿದ್ದರೆ ಸಿಎಂ ಹೇಳಿ¨ªಾರೆಂದು ಯಾರನ್ನಾದರೂ ಕರೆದೊಯ್ದರೆ ಸಿಎಂರನ್ನೇ ಬಂಧಿಸುತ್ತಾರೆಯೇ? ಬಲಪ್ರಯೋಗವಿಲ್ಲ, ಮೋಸವಿಲ್ಲ. ಆದರೂ 1ನೇ ಆರೋಪಿಯಾಗಿ ರೇವಣ್ಣರನ್ನು ಹೆಸರಿಸಿ¨ªಾರೆ ಎಂದು ಆಕ್ಷೇಪಿಸಿದರು.

ಸಾಕ್ಷಿಗಳ ಹೇಳಿಕೆಯಲ್ಲಿ ರೇವಣ್ಣ ಹೆಸರು ಉಲ್ಲೇಖ: ಜಾಯ್ನಾ
ಎಸ್‌ಐಟಿ ಪರ ಹಿರಿಯ ವಕೀಲೆ ಜಾಯ್ನಾ ಕೊಥಾರಿ ವಾದ ಮಂಡಿಸಿ ಅತ್ಯಾಚಾರ ತನಿಖೆಯ ಹಾದಿ ತಪ್ಪಿಸಲು ಅಪಹರಿಸಲಾಗಿದೆ. ರೇವಣ್ಣ ಸೂಚನೆ ಮೇರೆಗೆ ಈ ಅಪಹರಣ ನಡೆದಿದೆ ಎಂದು ದೂರಿನಲ್ಲಿದೆ. ಪ್ರಜ್ವಲ್‌ ರೇವಣ್ಣ ಭಾಗಿಯಾದ ಅಶ್ಲೀಲ ವೀಡಿಯೋವೊಂದರಲ್ಲಿ ಸಂತ್ರಸ್ತ ಮಹಿಳೆಯೂ ಇ¨ªಾರೆ. ಆಕೆ ದೂರು ನೀಡದಂತೆ ತಡೆಯಲು ಅಪಹರಿಸಲಾಗಿದೆ. ಸಿಆರ್‌ಪಿಸಿ 161 ಅಡಿ ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಸೆ.364 ಎ ರೇವಣ್ಣರಿಗೂ ಅನ್ವಯವಾಗುತ್ತದೆ.ಇದು ಜೀವಾವಧಿ, ಮರಣದಂಡನೆ ಶಿಕ್ಷೆ ವಿಧಿಸಬಹುದಾದಂತಹ ಪ್ರಕರಣವಾಗಿರುವುದರಿಂದ ಇದರಲ್ಲಿ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಸಾಕ್ಷಿಗಳು, ಸಂತ್ರಸ್ತೆಯರನ್ನು ಸುಮ್ಮನಿರಿಸುವ ಯತ್ನಗಳಾಗಬಹುದು. ಎಚ್‌.ಡಿ.ರೇವಣ್ಣ ವಿರುದ್ಧ ಈಗಾಗಲೇ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಕ್ರಿಮಿನಲ್‌ ಹಿನ್ನೆಲೆ ಇದೆ.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.