ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ
Team Udayavani, Jun 25, 2021, 11:33 AM IST
ಬೆಂಗಳೂರು: ಕಾಂಗ್ರೆಸ್ ನಲ್ಲಿ ‘ಸಿದ್ದರಾಮಯ್ಯ ಸಿಎಂ’ ಎಂಬ ಶಾಸಕರ ಹೇಳಿಕೆ, ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್, ಸಿದ್ದರಾಮಯ್ಯನವರೇ ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಶಿಷ್ಯಂದಿರು 150 ಸೀಟು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ 70ಕ್ಕೆ ಬಂದು ನಿಂತಿರಿ ಎಂದು ಟೀಕಿಸಿದರು.
ಸಿದ್ದರಾಮಯ್ಯಗೆ ಕ್ಷೇತ್ರವೇ ಇಲ್ಲ. ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದು. ಅವರೇ ಸಿಎಂ ಎನ್ನಲು ಇದು ‘ಟೂ ಅರ್ಲಿ’ ಎಂದು ಟೀಕಿಸಿದರು.
ಇದನ್ನೂ ಓದಿ;ಕಾಂಗ್ರೆಸ್: ಸಿಎಂ ಆಕಾಂಕ್ಷಿಗಳು ಹೆಚ್ಚಳ
ಸಿಎಂ ಸ್ಥಾನ ಪತ್ರಾವಳಿ ಅಲ್ಲ, ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಚವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು, ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಡಿ ಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು. ಒಂಸು ಸಲ ಸಿದ್ದರಾಮಯ್ಯ ಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಇದಾರೆ, ಪರಮೇಶ್ವರ್ ಇದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಕಾಂಗ್ರೆಸ್ಸಿಗ ವಿಶ್ವನಾಥ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…