ಸಚಿವ ಸ್ಥಾನ ಕೊಡಿ ಎಂದು ಯಾರ ಮನೆ ಬಾಗಿಲಿಗೂ ನಾನು ಹೋಗಲ್ಲ : ವಿಶ್ವನಾಥ್
Team Udayavani, Jul 28, 2021, 11:01 AM IST
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಸಿಎಂ ಆಗುತ್ತಿರುವುದು ಸಂತೋಷ. ಅವರಿಗೆ ಹಲವಾರು ಇಲಾಖೆಗಳಲ್ಲಿ ಕೆಲಸ ಮಾಡಿರುವ ಅನುಭವ ಇದೆ. ಸಮರ್ಥವಾಗಿ ಕೆಲಸ ಮಾಡುತ್ತಾರೆಂಬ ವಿಶ್ವಾಸ ಇದೆ ಹಳಬರು, ಹೊಸಬರನ್ನ ಸೇರಿಸಿಕೊಂಡು ಸಂಪುಟ ರಚನೆ ಮಾಡಬೇಕು. ನನಗೆ ಯಾವ ಖಾತೆಯೂ ಬೇಡ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಪ್ರಧಾನಿ ಮೋದಿ ಮಾಡಿದಂತೆ ಇಲ್ಲಿನ ಸಂಪುಟದಲ್ಲೂ ಮಾಡಬೇಕು. ನಾನು ಯಾರ ಮನೆ ಬಾಗಿಲಿಗೂ ಹೋಗೋದಿಲ್ಲ. ಸಚಿವ ಸ್ಥಾನ ಕೊಡಿ ಅಂತಾ ಯಾರನ್ನೂ ಕೇಳುವುದಿಲ್ಲ ಎಂದು ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ನಿನ್ನೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕಗೊಂಡಿದ್ದರು. ಇಂದು ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.