ಕೊಳಗೇರಿಗಳ ಹಕ್ಕುಪತ್ರಕ್ಕೆ ಅಭ್ಯಂತರವಿಲ್ಲ: ಕಾಗೋಡು
Team Udayavani, Mar 17, 2017, 6:59 AM IST
ವಿಧಾನಪರಿಷತ್ತು: ಕೊಳಗೇರಿಗಳು ಸರ್ಕಾರಿ ಜಮೀನಿನಲ್ಲಿ ಇದ್ದರೆ, ಅವರಿಗೆ ಹಕ್ಕುಪತ್ರ ನೀಡಲು ಯಾವುದೇ ತೊಂದರೆಯಿಲ್ಲ.
ಆದರೆ, ಖಾಸಗಿ ಜಮೀನಿನಲ್ಲಿ ಇರುವ ಕೊಳಗೇರಿಗಳಲ್ಲಿನ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕಾದರೆ, ಆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗು ತ್ತದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸೇರಿ ಇತರ ಸದಸ್ಯರು ಕೊಳಗೇರಿ ನಿವಾಸಿಗಳು ಮತ್ತು ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡುವ ಕುರಿತು ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ಅವರು, ಸರ್ಕಾರಿ ಜಮೀನು ಇದ್ದರೆ ಕೊಳಗೇರಿ ನಿವಾಸಿಗಳಿಗೆ 94ಸಿಸಿ ಪ್ರಕಾರ ಹಕ್ಕುಪತ್ರ ನೀಡಲು ಯಾವುದೇ ತೊಂದರೆಯಿಲ್ಲ. ಆದರೆ, ಖಾಸಗಿ ಜಮೀನು ಇದ್ದರೆ, ಆ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿ
ಸ್ವಾಧೀನಪಡಿಸಿಕೊಂಡ ಬಳಿಕವಷ್ಟೇ ಕಂದಾಯ ಇಲಾಖೆಯಿಂದ ಹಕ್ಕು ಪತ್ರ ನೀಡಬಹುದು ಎಂದರು.
ಗೋಮಾಳ ಜಮೀನಿನಲ್ಲಿ ವಾಸವಿರುವವರಿಗೆ ಹಕ್ಕುಪತ್ರ ನೀಡಲೂ ಯಾವುದೇ ತೊಂದರೆ ಇಲ್ಲ. ಆದರೆ, ಡೀಮ್ಡ್ ಅರಣ್ಯ ಜಮೀನಲ್ಲಿ ಅರಣ್ಯವಾಸಿ ಗಳಿದ್ದರೆ, ಆ ಜಮೀನನ್ನು ಡೀಮ್ಡ್ ಅರಣ್ಯ ವಾಪ್ತಿಯಿಂದ ಕೈ ಬಿಡಬೇಕಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪಸಮಿತಿಯಲ್ಲಿ ಪ್ರಸ್ತಾವನೆ ಸಿದ್ದಗೊಂಡಿದ್ದು, ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದು ಕಾಗೋಡು ತಿಳಿಸಿದರು.
ಅರಣ್ಯ ಜಮೀನು ಬಿಡಿಸಿಕೊಳ್ಳ ಬೇಕಾದರೆ, ನೇಣು ಹಾಕಿಕೊಳ್ಳ ಬೇಕು. ಹೊಸ ಅರಣ್ಯ ಸಂರಕ್ಷಣ ಕಾಯ್ದೆ ಜಾರಿಗೆ ಬಂದ
ಮೇಲಂತೂ ನರಕಕ್ಕೆ ಹೋಗಿಬರಬಹುದು. ಆದರೆ, ಅರಣ್ಯವಾಸಿ ಗಳು ಇರುವ ಜಮೀನನ್ನು ಅರಣ್ಯೇತರ ಜಮೀನು ಮಾಡಿಸಿ
ಕೊಳ್ಳುವುದು ಕಷ್ಟ.
ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?