ಅರ್ಧ ಹೇಳಿಕೆಗೆ ಮಹತ್ವ ನೀಡಿ ಗೊಂದಲ ಸೃಷ್ಟಿಸಲಾಗಿದೆ : ಸಚಿವ ಎಂಟಿಬಿ ನಾಗರಾಜ್

`ಕೇಳದೇ' ಕಾಂಗ್ರೆಸ್ ಪಕ್ಷ ಬಿಟ್ಟು ತಪ್ಪು ಮಾಡಿದೆ..!

Team Udayavani, May 26, 2022, 6:42 PM IST

mtb-nagaraju

ವಿಜಯಪುರ : ಕಾಂಗ್ರೆಸ್ಸಿನಿಂದ ಗೆದ್ದಿದ್ದ 15 ಶಾಸಕರು ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಬಂದಿದ್ದು, ಮತ್ತೆ ನಾವ್ಯಾರು ಕಾಂಗ್ರೆಸ್ ಪಕ್ಷಕ್ಕೆ ಮರಳುವ ಮಾತಿಲ್ಲ. ನನ್ನ ಅರ್ಧ ಹೇಳಿಕೆಗೆ ಮಹತ್ವ ನೀಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ನಮಗೆ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನವಿಲ್ಲ, ಬಿಜೆಪಿ ತೊರೆಯುವ ಮಾತಿಲ್ಲ ಎಂದು ಸಚಿವ ಎಂ.ಟಿ.ಬಿ.ನಾಗರಾಜ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಿಟ್ಟು ತಪ್ಪು ಮಾಡಿದೆ ಎಂದು ತಮ್ಮ ಹೇಳಿಕೆಗೆ ಸಮಜಾಯಿಸಿ ನೀಡಿದ ಅವರು, ಕಾರ್ಯಕರ್ತರು ನೀವೇಕೆ ಪಕ್ಷ ಬಿಟ್ಟು ಹೋದಿರಿ, ನಮ್ಮನ್ನು ಏಕೆ ಕೇಳಲಿಲ್ಲ ಎಂದೆಲ್ಲ ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸುವಾಗ ನಿಮಗೆ ಕೇಳದೇ ಹೋಗಿದ್ದು ತಪ್ಪಾಯ್ತಪ್ಪಾ ಅಂತ ಹೇಳಿದ್ದೆ. ಆದರೆ ಮಾಧ್ಯಮಗಳು `ಕೇಳದೇ’ ಎನ್ನುವ ಪದ ಕತ್ತರಿಸಿ ಕೇವಲ ನಾನು ಹೋಗಿ ತಪ್ಪು ಮಾಡಿದೆ ಎಂಬುದನ್ನು ಪ್ರಸಾರ ಮಾಡಿ ಗೊಂದಲ ಸೃಷ್ಟಿಸಿವೆ ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಉದ್ದೇಶದಿಂದ ಪಕ್ಷದ ವರಿಷ್ಠರು ಮೇಲ್ಮನೆ ಚುನಾವಣೆಗೆ ಟಿಕೆಟ್ ನೀಡಿರಲಿಕ್ಕಿಲ್ಲ. ಪಕ್ಷದಲ್ಲಿ ಸಂಘಟನೆ ಚತುರನಾಗಿರುವ ವಿಜಯೇಂದ್ರ ಅವರಿಗೆ ನೇರ ಚುನವಣೆಗೆ ಅವಕಾಶ ನೀಡುವ ಉದ್ದೇಶದಿಂದ ಪಕ್ಷ ಈ ನಿರ್ಧಾರ ಕೈಗೊಂಡಿರಬಹುದು. ಇದು ನನ್ನ ಊಹೆ ಎಂದರು.

ಇನ್ನೂ ಯುವಕರಾಗಿರುವ ವಿಜಯೇಂದ್ರ ಅವರು, ರಾಜಕೀಯದಲ್ಲಿ ಬೆಳೆಯಲು ಪಕ್ಷದ ವರ್ಚಸ್ಸಿನ ಜೊತೆಗೆ ಅವರ ತಂದೆಯ ಹೆಸರಿನ ದೊಡ್ಡ ಶಕ್ತಿ ಇದೆ. ಭವಿಷ್ಯದಲ್ಲಿ ಯುವ ನಾಯಕರಾಗಿ ಬೆಳೆಯುವ ಎಲ್ಲ ಅವಕಾಶ ಇರುವ ವಿಜಯೇಂದ್ರ ಅವರು, ಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದು ಶಾಸಕರಾಗಲಿದ್ದಾರೆ ಎಂದರು.

ಮೂರು ಬಾರಿ ಮುಖ್ಯಮಂತ್ರಿ ಆಗಿರುವ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತ ಜನಮನದಲ್ಲಿದೆ. ತಂದೆಯಂತೆ ಪಕ್ಷ ಸಂಘಟಿಸಿ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಪಕ್ಷ ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ವಿಶ್ವಾಸವಿದೆ ಎಂದರು.

ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲೇ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮತ್ತೆ ಗೆದ್ದು ಬರುತ್ತೇನೆ ಎಂದರು.

ಇದನ್ನೂ ಓದಿ : ಪುತ್ತೂರು: ಮರ ಕಡಿಯುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಸಾವು

ಪಠ್ಯಕ್ರಮದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಅಂತಿಮ ನಿರ್ಮಾನ ಶಿಕ್ಷಣ ಸಚಿವ ನಾಗೇಶ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟದ್ದು ಎಂದರು.

ಬಿಜೆಪಿ ಪಕ್ಷದಲ್ಲಿ ಯಡಿಯೂಪ್ಪ ಹಾಗೂ ಬಿ.ಎಲ್.ಸಂತೋಷ ಮಧ್ಯೆ ಗುಂಪುಗಾರಿಕೆ, ಬಣ ರಾಜಕಾರಣವಿಲ್ಲ. ಎಲ್ಲರೂ ಬಿಜೆಪಿ ಪಕ್ಷದವರೇ, ಇದೆಲ್ಲ ಊಹಾಪೋಹ ಮಾತ್ರ ಎಂದರು.

ಸಂಘಟನಾ ಚತುರರಾಗಿರುವ ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಪಕ್ಷದ ಹಿರಿಯ ಶಾಸಕರಾಗಿರುವ ಬಸನಗೌಡ ಪಾಟೀಲ ಅವರಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬೇಕಿತ್ತು. ಸಂಪುಟ ವಿಸ್ತರಣೆ ವೇಳೆ ವರಿಷ್ಠರು ಅವಕಾಶ ನೀಡುವ ನಿರೀಕ್ಷೆ ಇದೆ ಎಂದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.