ನನಗೆ ಯಾರೂ ಲೈಂಗಿಕ ಕಿರುಕುಳ ಕೊಟ್ಟಿಲ್ಲ; ಕಿರುತೆರೆ ನಟಿ ನಿರುಷಾ
Team Udayavani, Jan 30, 2017, 1:39 PM IST
ಬೆಂಗಳೂರು:ಕಂಠಪೂರ್ತಿ ಕುಡಿದು ದರ್ಶನ್ ಮತ್ತು ಆತನ ಗ್ಯಾಂಗ್ ಧಾರವಾಹಿ ನಟಿಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಭಾನುವಾರ ತಡರಾತ್ರಿ ವಿಠಲಮಲ್ಯ ರಸ್ತೆ ಬಳಿ ಇರುವ ಸ್ಕೈಬಾರ್ ವೊಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ ಎಂದು ಟಿವಿ9 ವರದಿ ತಿಳಿಸಿದೆ.
ಸ್ಕೈಬಾರ್ ನಲ್ಲಿ ದರ್ಶನ್ ಕಂಠಪೂರ್ತಿ ಕುಡಿದು, ತಡರಾತ್ರಿ 1.20ರ ಸುಮಾರಿಗೆ ಆಗಮಿಸಿದ್ದ ಸರ್ಪಸಂಬಂಧ ಎಂಬ ಧಾರವಾಹಿಯಲ್ಲಿ ಅಭಿನಯಿಸುತ್ತಿದ್ದ ನಟಿ ಮೈಮೇಲೆ ಕೈ ಹಾಕಿದ್ದ. ಆಗ ಕೈಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ದರ್ಶನ್ ಆಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದ ಎಂದು ವರದಿ ವಿವರಿಸಿದೆ.
ಈ ಘಟನೆ ನಡೆದಾಗ ದರ್ಶನ್ ಗೆ ನಟಿಯ ಸ್ನೇಹಿತರು ಹಿಗ್ಗಾಮುಗ್ಗಾ ಥಳಿಸಿದ್ದರು. ಬಳಿಕ ದರ್ಶನ್ ತನ್ನ ಸ್ನೇಹಿತರನ್ನು ಕರೆಯಿಸಿಕೊಂಡಿದ್ದ, ಆಗ ದಾಗ ಉಭಯ ತಂಡಗಳ ನಡುವೆ ಮಾರಾಮಾರಿ ನಡೆದಿತ್ತು.
ಬಳಿಕ ಯುವತಿ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಳು. ವಿಷಯ ತಿಳಿದ ಇನ್ಸ್ ಪೆಕ್ಟರ್ ನಾಗರಾಜ್ ಎಲ್ಲರನ್ನೂ ಠಾಣೆಗೆ ಕರೆತಂದಿದ್ದರು. ನಂತರ ಇನ್ಸ್ ಪೆಕ್ಟರ್ ದರ್ಶನ್ ತಂದೆ ಬಿಲ್ಡರ್ ಶ್ರೀನಿವಾಸ್ ಗೆ ದೂರವಾಣಿ ಮೂಲಕ ವಿಷಯ ತಿಳಿಸಿದಾಗ, ಶ್ರೀನಿವಾಸ್ ಠಾಣೆಗೆ ಬಂದು ಕಾಂಪ್ರಮೈಸ್ ಮಾಡಿಸಿದ್ದರು ಎಂದು ವರದಿ ವಿವರಿಸಿದೆ.
ನನಗೆ ಲೈಂಗಿಕ ಕಿರುಕುಳ ಕೊಟ್ಟಿಲ್ಲ: ನಟಿ ನಿರುಷಾ ಆರ್
ನನಗೆ ಬಿಲ್ಡರ್ ಶ್ರೀನಿವಾಸ್ ಪುತ್ರ ದರ್ಶನ್ ನಿಂದ ಯಾವುದೇ ಲೈಂಗಿಕ ಕಿರುಕುಳ ಆಗಿಲ್ಲ. ನನಗೆ ಕಚ್ಚಿಲ್ಲ. ಸ್ಕೈಬಾರ್ ನಲ್ಲಿ ಜಗಳ ಆಗಿರುವುದು ನಿಜ. ಇದರಿಂದ ಹೆದರಿ ನಾನು ಪೊಲೀಸರಿಗೆ ದೂರು ನೀಡಿದ್ದೆ. ನಾವೆಲ್ಲರು ಗೆಳೆಯರೇ ಆಗಿದ್ದೇವೆ. ನಂತರ ನಾವು ಅದನ್ನು ರಾಜೀ ಮಾಡಿಕೊಂಡಿದ್ದೇವೆ. ಅದು ಬಿಟ್ಟು ನಾನು ಯಾವುದೇ ಹಣ ತೆಗೆದುಕೊಂಡು ರಾಜೀ ಮಾಡಿಕೊಂಡಿಲ್ಲ ಇದೆಲ್ಲ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜೀ ಸಂಧಾನ ನಡೆದಿಲ್ಲ:
ಪ್ರಕರಣ ಸಂಬಂಧ ಪೊಲೀಸರಿಂದ ಯಾವುದೇ ರಾಜೀ ಸಂಧಾನ ನಡೆದಿಲ್ಲ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!