ಹಾಸನದಲ್ಲಿ ಮಾರಾಮಾರಿ; MLA ಪ್ರೀತಂಗೌಡ ಮನೆ ಮೇಲೆ ದಾಳಿ, ಕಲ್ಲು ತೂರಾಟ
Team Udayavani, Feb 13, 2019, 7:45 AM IST
ಹಾಸನ: ಆಪರೇಷನ್ ಕಮಲ ವಿಡಿಯೋ ಸಂಪೂರ್ಣವಾಗ ಬಹಿರಂಗವಾಗಿದ್ದು, ಅದರಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುರಿತು ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಸನದಲ್ಲಿ ಪ್ರೀತಂಗೌಡನ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬುಧವಾರ ನಡೆದಿದೆ.
ಇಂದು ಮಾಧ್ಯಮಗಳಲ್ಲಿ ಆಪರೇಷನ್ ಆಡಿಯೋ ಸಂಪೂರ್ಣವಾಗಿ ಬಯಲಾಗಿತ್ತು. ಆಡಿಯೋದಲ್ಲಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ. ಇದೀಗ ಹಾಸನದಲ್ಲಿ ಪ್ರೀತಂಗೌಡ ಮನೆ ಮುಂದೆ ಉದ್ವಿಗ್ನ ಪರಿಸ್ಥಿತಿ ತಲೆದೋರಿತ್ತು.
ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಪ್ರೀತಂಗೌಡ ಮನೆಯೊಳಕ್ಕೆ ನುಗ್ಗಲು ಯತ್ನಿಸಿದಾಗ, ಪೊಲೀಸರು ಅವರನ್ನು ತಡೆಯಲು ಹರಸಾಹನ ಪಡುವಂತಾಗಿದೆ. ಈ ಸಂದರ್ಭದಲ್ಲಿ ಪ್ರೀತಂ ಗೌಡ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಿತು.
ಪ್ರೀತಂಗೌಡನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಪ್ರೀತಂ ಗೌಡ ಬೆಂಬಲಿಗರೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.