Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ
ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ಮತ್ತು ಶಾಸಕರು ಭಾಗಿ
Team Udayavani, Mar 14, 2024, 5:45 PM IST
ಹಾಸನ: ಹೇಮಾವತಿ ಜಲಾಶಯದಿಂದ ಹಾಸನ ಜಿಲ್ಲೆಯ ಜನ – ಜಾನುವಾರುಗಳಿಗೆ ಕುಡಿಯುವ ನೀರು ಬಿಡದೆ ತುಮಕೂರು ಜಿಲ್ಲೆಗೆ ಮಾತ್ರ 2 ಟಿಎಂಸಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹಾಸನ ಮತ್ತು ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚನ್ನರಾಯಪಟ್ಟಣ ಸಮೀಪದ ಆಲಗೊಂಡನಹಳ್ಳಿ ಏತ ನೀರಾವರಿ ಯೋಜನೆ ಬಳಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಹಾಸನ ಜಿಲ್ಲಾಧಿಕಾರಿ ಕಚೇರಿ ಬಳಿ ಪಕ್ಷದ ಮುಖಂಡರು , ಶಾಸಕರಾದ ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಎಚ್ ಪಿ .ಸ್ವರೂಪ್, ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಧರಣಿ ನಡೆಸಿದರು.
ಶುಕ್ರವಾರ ಸಂಜೆ 5 ಗಂಟೆಯೊಳಗೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಹರಿಸಲು ಮುಂದಾಗದಿದ್ದರೆ ನಾಲೆಯ ತೂಬುಗಳನ್ನು ತೆರೆದು ನೀರು ಹರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.