ಬಿಜೆಪಿಯಿಂದ ದ್ವೇಷದ ರಾಜಕಾರಣ: ತಮ್ಮಣ್ಣ
Team Udayavani, Sep 9, 2019, 3:00 AM IST
ಭಾರತೀನಗರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ ವಿರೋಧಿಗಳನ್ನು ಮಟ್ಟ ಹಾಕುವ ಹುನ್ನಾರ ನಡೆಸುತ್ತಿದ್ದಾರೆಂದು ಶಾಸಕ ಡಿ.ಸಿ.ತಮ್ಮಣ್ಣ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರದಲ್ಲಿರುವ ಪ್ರತಿಪಕ್ಷಗಳನ್ನು ತುಳಿದು ತಾನೇ ಸರ್ವಾಧಿಕಾರಿಯಾಗುವ ರೀತಿಯಲ್ಲಿ ಪ್ರಧಾನಿ ಮೋದಿ ನಡೆದುಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದಂತೆ. ಡಿ.ಕೆ.ಶಿವಕುಮಾರ್ ಅವರನ್ನು ಇ.ಡಿ.ಯಂತಹ ಸ್ವಾಯತ್ತ ಸಂಸ್ಥೆಗಳ ಮೂಲಕ ಹಣಿಯಲು ಮುಂದಾಗಿರುವ ಕೇಂದ್ರ ಸರ್ಕಾರ ವರ್ತನೆ ಖಂಡನೀಯ ಎಂದರು. ರಾಜ್ಯದಲ್ಲಿ ಆಪರೇಷನ್ ಕಮಲದ ಬಗ್ಗೆ ತನಿಖೆ ಯಾಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದ ಯಾವುದೇ ರಾಜಕೀಯ ಪಕ್ಷಗಳು ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು ತಯಾರಿಲ್ಲದ ಕಾರಣ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಬಿಜೆಪಿ ಸರ್ಕಾರಕ್ಕೆ ಧಕ್ಕೆಯಾಗುವಂತಹ ಯಾವುದೇ ರೀತಿಯ ಪ್ರಯತ್ನವನ್ನು ಜೆಡಿಎಸ್ ಮಾಡುವು ದಿಲ್ಲ. ಅದು ತನ್ನ ಅವಧಿಯನ್ನು ಪೂರೈಸಲಿದೆ.
-ಸಾ.ರಾ.ಮಹೇಶ್, ಶಾಸಕ