ಮಳೆ ಆವಾಂತರ: ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ಧಾಳಿ


Team Udayavani, Jun 18, 2022, 7:12 PM IST

ಮಳೆ ಆವಾಂತರ: ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು: ನಗರದಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವುದು ಮತ್ತು ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವುದನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಈ ಸಾವುಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ, ಯಾಕೆ ಎಂದು ಪ್ರಶ್ನಿಸಿ, ಮಳೆಯಿಂದ ಆಗುತ್ತಿರುವ ಪ್ರತಿ ಸಾವಿಗೂ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್‌. ಪುರ ವಿಧಾನಸಭಾ ಕ್ಷೇತ್ರವು ನಿರಂತರವಾಗಿ ಮಳೆಯ ಅವಾಂತರಕ್ಕೆ ತುತ್ತಾಗುತ್ತಿದ್ದು, ಎಲ್ಲೆಡೆ ರಾಜಕಾಲುವೆಗಳ ಒತ್ತುವರಿಯ ದೂರು ಕೇಳಿ ಬರುತ್ತಿದೆ. ಕಳೆದ 9 ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಕ್ಷೇತ್ರಕ್ಕೆ ಅನುದಾನ ಮಂಜೂರಾಗಿದ್ದರೂ ಅಭಿವೃದ್ಧಿ ಕೆಲಸಗಳು ಆಗಿಲ್ಲ. ರಾಜಕಾಲುವೆಯಲ್ಲಿ ನತದೃಷ್ಟ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಗೋಡೆ ಕುಸಿದು ಮಹಿಳೆಯೊಬ್ಬರು ಅಸುನೀಗಿದ್ದಾರೆ.

ಎಸ್‌.ಆರ್‌. ಲೇಔಟ್‌ನಲ್ಲಿನ ಅಪಾರ್ಟ್‌ಮೆಂಟ್‌ ಜಲಾವೃತವಾಗಿದೆ. ನೆಲಮಹಡಿ ಸಂಪೂರ್ಣ ಜಲಾವೃತವಾಗಿ, 100 ಕಾರು, 300 ಬೈಕುಗಳು ತೇಲಿವೆ. ನಿವಾಸಿಗಳು ಹೊರ ಬರಲಾಗದೆ ಮನೆಗಳಲ್ಲೇ ಬಂಧಿಗಳಾಗಿದ್ದಾರೆ. ಕೆ.ಆರ್‌.ಪುರ ಕ್ಷೇತ್ರದಲ್ಲಿ ಬಹುತೇಕ ಅಪಾರ್ಟ್‌ಮೆಂಟ್‌ಗಳ ಹಣೆಬರಹ ಇಷ್ಟೇ ಆಗಿದೆ. ಕೆ.ಆರ್‌ ಪುರದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿಗೆ ಮಳೆನೀರು ನುಗ್ಗಿ ದಾಖಲೆಗಳು ಸಂಪೂರ್ಣ ನಾಶವಾಗಿವೆ. ಕಂಪ್ಯೂಟರ್‌ಗಳು ನೀರುಪಾಲಾಗಿ, ಈ ಸಾಲಿನ ಎಸ್‌ಎಸ್‌ಎಲ್‌ಸಿ ಮಕ್ಕಳ ದಾಖಲೆಗಳು ಕೊಚ್ಚಿ ಹೋಗಿವೆ.

ನಮಗೆ ನಿಮ್ಮ ಪರಿಹಾರ ಬೇಡ, ರಾಜಕಾಲುವೆ ಸಮಸ್ಯೆ ಬಗೆಹರಿಸಿ ಎಂದು ಸ್ಥಳೀಯರು ಸಚಿವರಿಗೆ ಬೆಳಗ್ಗೆಯೇ ಮಂಗಳಾರತಿ ಮಾಡಿದ್ದಾರೆ. ಆ ಸಚಿವರಿಗೆ ಅನುದಾನದ ಮೇಲಿರುವ ಅಕ್ಕರೆ ಜನರ ಮೇಲೆ ಇಲ್ಲ. ಬೇಜವಾಬ್ದಾರಿ ಬಿಬಿಎಂಪಿಗೆ ನ್ಯಾಯಾಲಯ ಛೀಮಾರಿ ಹಾಕಿದರೂ, ಅದಕ್ಕೆ ನಾಚಿಕೆ ಇಲ್ಲ. ಅವರ ಜತೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಜನರಿಗೆ ಧಮ್ಕಿ ಹಾಕಿದ್ದಾರೆ. ಅಧಿಕಾರ ಕೊಟ್ಟ ಜನರ ಮುಂದೆಯೇ ಅಹಂಕಾರವೇ?

ರಾಜಕಾಲುವೆಗೆ ಬಲಿಯಾದ ಯುವಕನಿಗೆ ಸೂಕ್ತ ಪರಿಹಾರ ನೀಡಬೇಕು. ಮುಖ್ಯಮಂತ್ರಿಗಳು ಇಡೀ ಕೆ.ಆರ್‌. ಪುರವನ್ನು ಸುತ್ತಿ, ಎಲ್ಲ ಸಮಸ್ಯೆಗಳಿಗೆ ತುರ್ತು ಪರಿಹಾರ ಕಂಡುಕೊಳ್ಳಬೇಕು. 9 ವರ್ಷದಿಂದ ಆ ಕ್ಷೆತ್ರಕ್ಕೆ ನೀಡಿರುವ ಅನುದಾನ, ಮತ್ತದರ ಬಳಕೆಯ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.