ರೈತರನ್ನು ಎದುರು  ಹಾಕಿಕೊಂಡು ರಾಜಕಾರಣ ಅಸಾಧ್ಯ: ದೇವೇಗೌಡ


Team Udayavani, Sep 12, 2021, 6:08 AM IST

ರೈತರನ್ನು ಎದುರು  ಹಾಕಿಕೊಂಡು ರಾಜಕಾರಣ ಅಸಾಧ್ಯ: ದೇವೇಗೌಡ

ಹಾಸನ: ಈ ದೇಶದಲ್ಲಿ ರೈತರು ಹಾಗೂ ವಿದ್ಯಾರ್ಥಿಗಳನ್ನು ಎದುರು ಹಾಕಿಕೊಂಡು ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಅಭಿಪ್ರಾಯಪಟ್ಟರು.

ಹಾಸನ ತಾಲೂಕು ಕಟ್ಟಾಯ ಹೋಬಳಿ ಗೊರೂರು ಸಮೀಪದ ಉಡುವಾರೆ ಗ್ರಾಮದಲ್ಲಿ ಶುಕ್ರವಾರ ನಡೆದ ದೇವಾಲಯಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ದಿಲ್ಲಿಯ ಗಡಿಯಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಹೋರಾಟ ನಿರತ ರೈತರಿಗೆ ದೇಶದ ವಿವಿಧ ರಾಜ್ಯಗಳ ರೈತರು, ರೈತ ಸಂಘಟನೆಗಳ ಬೆಂಬಲವೂ ಇದೆ. ಹಾಗಾಗಿಯೇ ಹಲವು ತಿಂಗಳು ಕಳೆದರೂ ರೈತರ ಪ್ರತಿಭಟನೆ ನಿಂತಿಲ್ಲ ಎಂದರು.

ದೇಶದಲ್ಲಿ ರೈತರು, ವಿದ್ಯಾರ್ಥಿಗಳನ್ನು ಎದುರು ಹಾಕಿಕೊಂಡು ರಾಜಕಾರಣ ಮಾಡು ವುದು ಕಷ್ಟ ಎಂದು ಪ್ರಧಾನಿ ಮೋದಿಗೂ ಹೇಳಿದ್ದೆ. ರೈತರೊಂದಿಗೆ ಚರ್ಚೆ ಮಾಡಿ, ನಾನೂ ಪಾಲ್ಗೊಳ್ಳುತ್ತೇನೆ. ರೈತರ ಪ್ರತಿಭಟನೆ ಹೆಚ್ಚು ದಿನ ಮುಂದುವರಿ ಯಲು ಅವಕಾಶ ಕೊಡಬೇಡಿ ಎಂದು ಸಲಹೆ ನೀಡಿದ್ದೆ. ಆದರೆ ಪ್ರಧಾನಿಯವರು ಈವರೆಗೂ ಸ್ಪಂದಿಸಿಲ್ಲ ಎಂದು ವಿಷಾದಿಸಿದರು.

ದೇಶದಲ್ಲಿ ಬಡತನ:

ಶ್ರೀಮಂತಿಕೆಯ ನಡುವಿನ ಅಂತರ ಹೆಚ್ಚುತ್ತಲೇ ಹೋಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಡವರ ಸಂಖ್ಯೆ ಹೆಚ್ಚಿದ್ದರೆ, ಸಿರಿವಂತರ ಸಂಖ್ಯೆ ಕಡಿಮೆ ಇದೆ. ಆದರೆ ನಗರ ಪ್ರದೇಶಗಳು ಶ್ರೀಮಂತರಿಗೆ ಸೀಮಿತವಾಗಿವೆ ಎಂಬ ಪರಿಸ್ಥಿತಿ ಇದೆ ಎಂದರು.

ರೈತರು ಮತ್ತು ಗ್ರಾಮೀಣ ಪ್ರದೇಶದ ಜನರ ಪರವಾದ ನಿಲುವು ಹೊಂದಿರುವ ಜೆಡಿಎಸ್‌ ಪ್ರಾದೇಶಿಕ ಪಕ್ಷ. ಈ ಪಕ್ಷದಿಂದ ನಮಗೆ ಅಡಚಣೆ ಇದೆ ಎಂದು ಎರಡು ರಾಷ್ಟ್ರೀಯ ಪಕ್ಷಗಳು ಭಾವಿಸಿವೆ. ಜೆಡಿಎಸ್‌ ಈ ರಾಜ್ಯದಲ್ಲಿ ಇರಬಾರದು ಎಂಬ ಮನೋಭಾವನೆಯಿಂದ ಎರಡು ರಾಷ್ಟ್ರೀಯ ಪಕ್ಷಗಳೂ ರಾಜಕಾರಣ ಮಾಡಿಕೊಂಡು ಬರುತ್ತಿವೆ. ಆದರೆ ಈ ರಾಜ್ಯದ ರೈತರು ಜೆಡಿಎಸ್‌ ಅನ್ನು ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಪಕ್ಷ ಸಂಘಟನೆಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಹಮ್ಮಿಕೊಳ್ಳುತ್ತೇನೆ ಎಂದು  ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.