HD Kumaraswamy; ‘ಪುನರ್ಜನ್ಮ ಸಿಕ್ಕಿದೆ..’: ಆಸ್ಪತ್ರೆಯಿಂದ ಮನೆಗೆ ತೆರಳಿದ ಕುಮಾರಸ್ವಾಮಿ
Team Udayavani, Sep 3, 2023, 12:19 PM IST
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದರು.
ಪಾರ್ಶ್ವವಾಯುಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಚೇತರಿಕೆ ಕಂಡಿದ್ದು, ಜಯನಗರದ ಆಪೊಲೊ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಪುನರ್ಜನ್ಮ ಸಿಕ್ಕಿದೆ. ದೇವರು, ವೈದ್ಯರು, ತಂದೆ ತಾಯಿಗಳ ಆಶೀರ್ವಾದವೇ ಇದಕ್ಕೆ ಕಾರಣ. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ನನಗೆ ಪುನರ್ಜನ್ಮ ಸಿಕ್ಕಿದೆ ಎಂದರು.
ಇದನ್ನೂ ಓದಿ:ODI World Cup 2023; ಭಾರತ ತಂಡ ಬಹುತೇಕ ಅಂತಿಮ; ಏಷ್ಯಾಕಪ್ ತಂಡದಲ್ಲಿರುವ ಇಬ್ಬರು ಔಟ್
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿದ ನಾಡಿನ ಜನತೆ, ಮುಖಂಡರುಗಳಿಗೆ ಧನ್ಯವಾದ ಎಂದ ಅವರು, ಸ್ಟ್ರೋಕ್ ಬಗ್ಗೆ ಯಾರು ನಿರ್ಲಕ್ಷ್ಯ ತೋರಬೇಡಿ ಎಂದು ಮನವಿ ಮಾಡಿದರು.
ಆಸ್ಪತ್ರೆಯಿಂದ ಬಿಡಿದ ಮನೆಯತ್ತ ಪ್ರಯಾಣ ಬೆಳೆಸಿದ ಕುಮಾರಸ್ವಾಮಿ ಅವರಿಗೆ ಪುತ್ರ ನಿಖಿಲ್ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್