ಕೆಲಸ ಮಾಡದ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಎಚ್.ಡಿ.ಕುಮಾರಸ್ವಾಮಿ


Team Udayavani, Sep 26, 2022, 4:07 PM IST

ಕೆಲಸ ಮಾಡದ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದರು.

ಪಕ್ಷ ಸಂಘಟನೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಾಕೀತು ಮಾಡಿದರು.

ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ಆದರೆ, ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಹುದ್ದೆಯಿಂದ ಕಿತ್ತು ಹಾಕುತ್ತೇನೆ: ಸಿಎಂ ಇಬ್ರಾಹಿಂ

ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುವುದು ಎಂದರು.

ಪಕ್ಷದ ಕೆಲಸ ಮಾಡಿ. ಇಲ್ಲವಾದರೆ ಕೆಲಸ ಮಾಡುವವರಿಗೆ ಜಾಗ ಬಿಡಿ. ಪಕ್ಷದ ಕೆಲಸ ಮಾಡದವರಿಗೆ ಅವಕಾಶ ಇಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದರು.

ರಾಜ್ಯ ಪದಾಧಿಕಾರಿಗಳು ಕನಿಷ್ಠ ತಿಂಗಳಿಗೆ ಹದಿನೈದು ದಿನವಾದರೂ ರಾಜ್ಯ ಪ್ರವಾಸ ಮಾಡಬೇಕು. ಜನರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಬೇಕು ಎಂದು ಅವರು ತಾಕೀತು ಮಾಡಿದರು.

ಇದನ್ನೂ ಓದಿ:ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ‘ಕಿಲ್ ಯು ಜಿಹಾದಿ’ ಬರಹ

ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ; ಯುವ ಜನತಾ ದಳ ಘಟಕವನ್ನು ಬಲಪಡಿಸುವುದು ಹಾಗೂ ರಾಜ್ಯದ ಉದ್ದಗಲಕ್ಕೂ ಯುವ ಕಾರ್ಯಕರ್ತರನ್ನು ಸಜ್ಜು ಮಾಡಲು ತಕ್ಷಣವೇ ಕ್ರಮ ವಹಿಸಲಾಗುವುದು ಎಂದರು.

ಈಗಾಗಲೇ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಯುವ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಜನತಾ ಜಲಧಾರೆ ಸಮಾವೇಶದಲ್ಲಿ ಯುವ ಪಡೆ ಅದ್ಬುತವಾಗಿ ಕೆಲಸ ಮಾಡಿದ್ದರು. ಮುಂದಿನ ದಿನಗಳಲ್ಲಿಯೂ ನಮ್ಮ ತಂಡ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿದೆ ಎಂದು ನಿಖಿಲ್ ಅವರು ಹೇಳಿದರು.

ಶಾಸಕರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ಕೆ.ಎಂ.ಕೃಷ್ಣಾರೆಡ್ಡಿ, ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ಎನ್.ಎಂ.ನಬಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್ ಮುಂತಾದವರು ಹಾಗೂ ಕಾರ್ಯಕಾರಿಣಿಯ ಎಲ್ಲ ಸದಸ್ಯರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.