ಎಚ್.ಡಿ. ಕುಮಾರಸ್ವಾಮಿಗೆನಾಡಿದ್ದು ಶಸ್ತ್ರಚಿಕಿತ್ಸೆ
Team Udayavani, Sep 21, 2017, 7:52 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯಕ್ಕೆ ಸಂಬಂಧಿಸಿದ ಲ್ಯಾಪ್ರೋಸ್ಕೋಪಿಕ್ ಕೀ ಹೋಲ್ ಶಸ್ತ್ರಚಿಕಿತ್ಸೆ ಶನಿವಾರ ನಡೆಯಲಿದೆ. ಇದಕ್ಕಾಗಿ ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ನಂತರ ಎರಡು ದಿನ ತಪಾಸಣೆ ನಡೆಸಲಾಗುವುದು. 30 ರಿಂದ 60 ನಿಮಿಷಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಲಿದ್ದು, ನಂತರ ಒಂದು ತಿಂಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ಸಿಂಗಪುರಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ.
ಈಗಾಗಲೇ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಹಾಗೂ ಆ ನಂತರ ಕಡ್ಡಾಯ ವಿಶ್ರಾಂತಿ ಜತೆಗೆ ಜೀವನಶೈಲಿಯಲ್ಲಿ ಮಾಡಿಕೊಳ್ಳಬೇಕಾದ ಬದಲಾವಣೆ ಬಗ್ಗೆ ಕುಮಾರಸ್ವಾಮಿಯವರಿಗೆ ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಲು ಲಂಡನ್ನಿಂದ ಈಗಾಗಲೇ ಮೂವರು ವೈದ್ಯರು ಆಗಮಿಸಿದ್ದು, ಭಾರತದ ಐವರು ಹೃದ್ರೋಗ ತಜ್ಞರು ಜತೆಗೂಡಲಿದ್ದಾರೆ. ಹೃದಯದಲ್ಲಿ ಅಳವಡಿಸಿರುವ ಮೆಟಲ್ ವಾಲ್Ì ಬ್ಲಾಕ್ ಆಗಿದ್ದು, ಅದಕ್ಕೆ ಬದಲಾಗಿ ಟಿಶ್ಯು ವಾಲ್Ì ಬದಲಾವಣೆ ಮಾಡಲಾಗುವುದು. ಇದರಿಂದ ಮುಂದಿನ 15 ವರ್ಷಗಳ ಕಾಲ ಯಾವುದೇ ತೊಂದರೆಯಾಗದು. ಸಿಂಗಪುರದಿಂದ ಮರಳಿದ ನಂತರ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇದಕ್ಕಾಗಿ ವಿಶೇಷ ವಾಹನ ಸಹ ಸಿದ್ಧಪಡಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್