ಯೋಗ್ಯತೆ ಇದ್ದರೆ ಬೆಂಗಳೂರು ನಗರದ ಆರೋಗ್ಯ ಸರಿಪಡಿಸಿ: ಸೋಮಣ್ಣಗೆ ಕುಮಾರಸ್ವಾಮಿ ಟಾಂಗ್


Team Udayavani, May 21, 2022, 3:19 PM IST

ಯೋಗ್ಯತೆ ಇದ್ದರೆ ಬೆಂಗಳೂರು ನಗರದ ಆರೋಗ್ಯ ಸರಿಪಡಿಸಿ: ಸೋಮಣ್ಣಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ ಇಂದು ಮಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರ ಏನು ಅಂತ ಸೋಮಣ್ಣ ಅವರಿಂದ ಕಲಿಯಬೇಕಿಲ್ಲ ಎಂದು ಅವರು ಹೇಳಿದರು.

ಜೆಡಿಎಸ್ ನಲ್ಲಿ ಯಾವ ರೀತಿ ಬೆಳೆದಿರಿ, ದೇವೇಗೌಡರ ಹೆಸರಲ್ಲಿ ಯಾವ ರೀತಿ ಬೆಳವಣಿಗೆ ಕಂಡಿರಿ ಎನ್ನುವುದು ಎಲ್ಲಾ ಗೊತ್ತಿದೆ. ಬಿಡುವಿದ್ದರೆ ಬರುವುದಕ್ಕೆ ಹೇಳಿ ಪಾಠ ಮಾಡುತ್ತೇನೆ ಎಂದು ಸಚಿವ ಸೋಮಣ್ಣ ಹೇಳಿಕೆಗೆ ಕುಮಾರಸ್ವಾಮಿ ಅವರು ಗುಡುಗಿದರು.

ರಾಜಕಾಲುವೆ, ರಸ್ತೆ ಕೆಲಸ ಮಾಡದೆ ಕೋಟ್ಯಂತರ ರೂಪಾಯಿ ಲೂಟಿ ಮಾಡಿದಿರಿ. ನಾನು 1973 ರಿಂದ ಬೆಂಗಳೂರಿನಲ್ಲೇ ಬದುಕಿ ಕೆಲಸ ಮಾಡಿದ್ದೇನೆ. ಮತ ಕೊಟ್ಟ ಜನರಿಗೆ ಮೋಸ ಮಾಡಿಲ್ಲ. ಅಧಿಕಾರಿಗಳಿಗೆ ಹಿಂದೆ ನೀರು ನಿಲ್ಲಿಸಲು ಹೇಳಿ ಮುಂದೆ ಬೈಯುವ ಕೆಲಸ ಮಾಡಿಲ್ಲ ಎಂದು ಅವರು ಟಾಂಗ್ ನೀಡಿದರು.

ಸೋಮಣ್ಣ ಅವರಿಗೆ ಹೊಟ್ಟೆ ಉರಿ ಶುರುವಾಗಿರಬೇಕು. ದುಡ್ಡು, ಅಧಿಕಾರದ ಮತ್ತಲ್ಲಿ ಅವರಿದ್ದಾರೆ. ನರೇಂದ್ರ ಮೋದಿ‌ ಅವರ ಮುಖ ನೋಡಿ ಮತ ಹಾಕ್ತಾರೆ ಅಂದುಕೊಂಡಿದ್ದರೆ ಅದು ಸುಳ್ಳು. ಇಡೀ ಬೆಂಗಳೂರು ನಗರವನ್ನೇ ಅವರಿಸಿಕೊಳ್ಳುತ್ತೇವೆ ಎಂದರೆ ಅದು ಸುಳ್ಳು ಅಷ್ಟೇ. ಬನ್ನಿ ಜನರ ನೋವು ನೋಡಿ. ಅಭಿವೃದ್ಧಿ ಹೆಸರಲ್ಲಿ ತಿಂದಿದ್ದು ಸಾಕು. ರಾಜಕಾಲುವೆಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಿದ್ದಾರೆ. ಅದನ್ನಾದರೂ ಸರಿಯಾಗಿ ಉಪಯೋಸಿಕೊಳ್ಳಿ. ಚಕ್ರ ತಿರುಗುತ್ತದೆ, ಅವರಿಗೆ ಕುಮಾರಸ್ವಾಮಿಯನ್ನು ಅರಗಿಸಿಕೊಳ್ಳಲು ಆಗುವುದಿಲ್ಲ ಎಂದರು.

ಇದನ್ನೂ ಓದಿ:ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್

ಬೆಂಗಳೂರು ನಗರ ಜನತೆಗೆ ಹೊಸ ಪ್ರಣಾಳಿಕೆ ಅಂತ ಕಾಂಗ್ರೆಸ್ ಹೇಳುತ್ತಿದೆ. ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಅವರು ಯಾವ ಕೆಲಸವನ್ನೂ ಮಾಡಲಿಲ್ಲ. 2006ರಲ್ಲಿಯೇ ಬೆಂಗಳೂರಿನ ಬೆಳವಣಿಗೆ ನಿಲ್ಲಿಸಿ ಐದು ಟೌನ್ ಶಿಪ್ ಮಾಡಲು ನೀಲನಕ್ಷೆ ತಯಾರು ಮಾಡಿದ್ದೆ. ಆದರೆ, ನಮಗೆ ಸಹಕಾರ ಸಿಗಲಿಲ್ಲ. ಕೊರಿಯನ್ ಕಂಪನಿ ಮುಂದೆ ಬಂದಿತ್ತು. ಯೋಜನೆಗೆ ಕ್ಲಿಯರೆನ್ಸ್ ಕೊಡಲು ಮುಂದಾಗಿದ್ದೆ ನಾನು. ಬಿಜೆಪಿಯವರು ಬೆಂಬಲ ಕೊಡಲಿಲ್ಲ. ಕೆರೆ ಕಟ್ಟೆಗಳನ್ನು ನುಂಗಿದ ನೀವು ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಆರ್. ಅಶೋಕ್ ಗೆ ತಿರುಗೇಟು: ನಾವು ಟೀ ಮಾರುವವರಿಗೂ ಟಿಕೆಟ್ ಕೊಡುತ್ತೇವೆ, ಜೆಡಿಎಸ್ ನವರು ಮನೆಯವರಿಗೆ ಮಾತ್ರ ಕೊಡುತ್ತಾರೆ ಎಂದು ಹೇಳಿಕೆ ನೀಡಿರುವ ಸಚಿವ ಆರ್ ಅಶೋಕ್ ಗೆ ತಿರುಗೇಟು ಕೊಟ್ಟ ಎಚ್ ಡಿಕೆ, ಯಾರು ಟೀ ಮಾರುವವರಿಗೆ ಟಿಕೆಟ್ ಕೊಡುತ್ತಾರೆ. ಯಾರು ಮನೆಯವರಿಗೆ ಟಿಕೆಟ್ ಕೊಡುತ್ತಾರೆ ಎನ್ನುವುದು ಗೊತ್ತಿದೆ. ಬಿಜೆಪಿಯಲ್ಲಿ ಇರುವ ಕುಟುಂಬ ರಾಜಕರಣದ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ. ಅವರಂತೆಯೇ ನಾನು ಲೂಟಿ ಮಾಡಿಲ್ಲ. ಹಲೋ ಕಂದಾಯ ಸಚಿವರು ಎಂದರೆ ಪೋಡಿ, ಪಹಣಿ ಬಂದು ಮನೆ ಮುಂದೆ ಬೀಳುತ್ತಂತೆ. ಜನರನ್ನು ಯಾಮರಿಸುವುದಕ್ಕೂ ಒಂದು ಮಿತಿ ಬೇಡವಾ? ಇಂಥ ವ್ಯಕ್ತಿ ನಮ್ಮ ಕುಟುಂಬದ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಕನ್ನಡಿಗರ ಸ್ವಾಭಿಮಾನ, ಪ್ರಾದೇಶಿಕ ಪಕ್ಷ ಉಳಿಸಬೇಕು ಟೀ ಮಾರುವವರು ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ ಜನರ ಕಷ್ಟ ಅರಿಯುವವರನ್ನು ಆಯ್ಕೆ ಮಾಡುತ್ತೇವೆ. ಟೀ ಮಾರುವವರ ಹೆಸರಿನಲ್ಲಿ ಲೂಟಿ ಮಾಡುವವರನ್ನು ಆಯ್ಕೆ ಮಾಡಿಲ್ಲ ಎಂದು ತಿರುಗೇಟು ನೀಡಿದರು.

ಮಾಗಡಿ ಶಾಸಕರ ಸ್ಥಾನ ಖಾಲಿ ಇಲ್ಲ: ಮಾಗಡಿ ಕ್ಷೇತ್ರದ ಗುದ್ದಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ವೈಯಕ್ತಿಕವಾಗಿ ಕ್ಷೇತ್ರಗಳಲ್ಲಿ ಯಾರನ್ನು ಯಾರು ಹೊಗಳಿರುತ್ತಾರೋ ಗೊತ್ತಿಲ್ಲ. ಮಾಗಡಿ ಕ್ಷೇತ್ರ ವಿಚಾರದಲ್ಲಿ ನನ್ನ ಬಳಿ ಚರ್ಚೆ ಆಗಿಲ್ಲ‌. ಯಾವ ದೃಷ್ಟಿಯಿಂದ ಬಾಲಕೃಷ್ಣ ಅವರು ಪತ್ರ ಬರೆದಿದ್ದಾರೆ ಗೊತ್ತಿಲ್ಲ. ಆಗ ನನ್ನ ಆತ್ಮೀಯ ಸ್ನೇಹಿತರು. ಆದರೆ ಅವರ ನಿರ್ಧಾರದಿಂದ ಹೋಗಿದ್ದಾರೆ. ಯಾರು ಅವರ ಆತ್ಮೀಯರು ನನ್ನ ಬಳಿ ಮಾತಾಡಲ್ಲ. ಶಾಸಕರ ಸ್ಥಾನ ಖಾಲಿ‌ ಇಲ್ಲ ಏನಂತ ಚರ್ಚೆ ಮಾಡಲಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಟಿ.ಎ.ಶರವಣ, ರಮೇಶ್ ಗೌಡ, ಜೆಡಿಎಸ್ ನಗರ ಅಧ್ಯಕ್ಷ ಆರ್. ಪ್ರಕಾಶ್, ಸ್ಥಳೀಯ ಜೆಡಿಎಸ್ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.