ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ


Team Udayavani, Sep 27, 2022, 6:44 PM IST

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು,ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ, ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್ಐ ಮೇಲೆ ಎನ್‌ ಐಎ ನಿಂದ ದಾಳಿ ಆಗಿತ್ತು. ಆ ದಾಳಿ ಸಮಯದಲ್ಲಿ ಪಿಎಫ್ಐ ಸಂಘಟನೆಗಳ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದರು ಕುಮಾರಸ್ವಾಮಿ ಅವರು.

ರಾಜ್ಯ ಪೊಲೀಸರು ನಡೆಸಿದ ದಾಳಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಜಿಲ್ಲಾ ಅಧ್ಯಕ್ಷರ‌ ಬಂಧನವಾಗಿದೆ. ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಎನ್ನುವುದು ಸರಕಾರದ ಆದೇಶವೋ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯ ಆಗಿದೆಯೋ ಗೊತ್ತಿಲ್ಲ. ಆದರೆ, ಕಾರ್ಯಾಚರಣೆ ಬಗ್ಗೆ ನಾಡಿನ ಜನರ ಮುಂದೆ ನಿಜವಾದ ವಾಸ್ತವವಾದ ಅಂಶ ಸರಕಾರ ಇಡಬೇಕು ಎಂದು ಅವರು ಆಗ್ರಹಪಡಿಸಿದರು.

ಇದನ್ನೂ ಓದಿ: ಪುಳಕಿತ್ ರೆಸಾರ್ಟ್ ವೇಶ್ಯಾವಾಟಿಕೆ ಮತ್ತು ಡ್ರಗ್ಸ್ ದಂಧೆಯ ಅಡ್ಡೆಯಾಗಿತ್ತು; ಮಾಜಿ ಉದ್ಯೋಗಿ

ಏಕಾಏಕಿ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಯಾವುದೇ ಸಮಾಜದ ಮೇಲೆ ಅತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು‌ ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ  ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ‌ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ  ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದರು.

ನಿಜವಾಗಿಯೂ ಸಮಾಜಘಾತುಕ ಶಕ್ತಿ ಬಗ್ಗೆ ಮಾಹಿತಿ ಇದ್ದರೆ  ಜನರ ಮುಂದೆ ಇಡಬೇಕು. ನೆಪಗಳನ್ನು ಹೇಳಿ ಸರಕಾರ ನುಣುಚಿಕೊಳ್ಳಬಾರದು. ವಾಸ್ತವ ಅಂಶಗಳನ್ನು ಜನರ ಮುಂದೆ ಸರಕಾರ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ: ಆಲಿಯಾ ಪಕ್ಕದಲ್ಲಿ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ‌ ಕಷ್ಟ ಹೇಳಿದ ಪತಿ ರಣ್ಬೀರ್

ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಯಾರು ಯಾರನ್ನು  ಬಂಧನ ಮಾಡಿದ್ದಾರೆ. ಅವರ ಸಮಾಜಘಾತುಕ ಕೆಲಸ ಏನು? ಎಂಬುದನ್ನು ಅಂತ ಸರಕಾರ ಜನರ ಮುಂದೆ ಇಡದೇ ಹೋದರೆ, ಸರಕಾರವೇ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.