ಎಚ್ಡಿಕೆ ಬಜೆಟ್ ಮಂಡನೆ ಅನುಮಾನ: ಸವದಿ ವ್ಯಂಗ್ಯ
Team Udayavani, Feb 4, 2019, 1:55 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಒಳಜಗಳ ಗಮನಿಸಿದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸುವುದೇ ಅನುಮಾನ ಎಂದು ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರು ಸೇರಿಕೊಂಡು ಸರ್ಕಾರ ಉರುಳಿಸಲಿದ್ದಾರೆ ಎಂದರು. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸುವುದೇ ಅನುಮಾನ. ಇದಕ್ಕೆ ಹಲವು ಕಾರಣಗಳಿವೆ. ಜೆಡಿಎಸ್-ಕಾಂಗ್ರೆಸ್ನ ಒಳಜಗಳ ಮತ್ತು ಕಾಂಗ್ರೆಸ್ ಶಾಸಕರ ವಿಭಿನ್ನ ಹೇಳಿಕೆ ಗಮನಿಸಿದರೆ ಬಜೆಟ್ ಮಂಡನೆಯ ಬಗ್ಗೆ ಅನುಮಾನ ಬರುತ್ತದೆ ಎಂದು ಹೇಳಿದರು.