ಎಚ್ಡಿಕೆ ಸರ್ಕಾರ ಪತನ ಶಕ್ತಿ ಕುಂದಗೋಳಕ್ಕಿದೆ: ಶ್ರೀ ರಾಮುಲು
Team Udayavani, May 12, 2019, 3:03 AM IST
ಕುಂದಗೋಳ: ಐದು ಜಿಲ್ಲೆಗಷ್ಟೇ ಸೀಮಿತವಾದ ಸಿಎಂ ಕುಮಾರಸ್ವಾಮಿ ಅವರ ಸರ್ಕಾರವನ್ನು ಪತನಗೊಳಿಸುವ ಶಕ್ತಿ ಈ ಕ್ಷೇತ್ರದ ಮತದಾರರಲ್ಲಿದೆ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಹೇಳಿದರು.
ಕಳಸ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಮತಯಾಚಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ನಿರ್ಲಕ್ಷಿಸಿದ ಸಮ್ಮಿಶ್ರ ಸರ್ಕಾರದ ಸಿಎಂ ಕೇವಲ 5 ಜಿಲ್ಲೆಗಳಿಗೆ ಸೀಮಿತವಾದ ಬಜೆಟ್ ಮಂಡಿಸಿರುವುದಕ್ಕೆ ಜನ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ.
ಈಗಾಗಲೇ ಪಕ್ಷೇತರ ಶಾಸಕರು ನಮ್ಮೊಂದಿಗಿದ್ದಾರೆ. ಇನ್ನೂ 20 ಶಾಸಕರು ಮೇ 23ರ ನಂತರ ನಮ್ಮೊಟ್ಟಿಗೆ ಕೈ ಜೋಡಿಸುತ್ತಾರೆ. ಬಳಿಕ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದರು.