ಸಿಎಂಗೆ ತರಾಟೆ; ಮರಿಸ್ವಾಮಿಗೆ ಭರ್ಜರಿ ಸನ್ಮಾನ ಮಾಡಿದ ಎಚ್ಡಿಕೆ
Team Udayavani, Apr 26, 2018, 11:24 AM IST
ಮೈಸೂರು: ನಿಮಗೆ ಓಟ್ ಹಾಕಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ತಿರುಗೇಟು ನೀಡಿ ಸುದ್ದಿಯಾಗಿರುವ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಸನ್ಮಾನ ಮಾಡಿ ಅಭಿನಂದಿಸಿದ್ದಾರೆ.
ಮರಿಸ್ವಾಮಿ ಅವರಿಗೆ ಹಾರ, ಶಾಲು, ಮೈಸೂರು ಪೇಟ ತೊಡಿಸಿ ಅಭಿನಂದಿಸಿದ ಕುಮಾರಸ್ವಾಮಿ ಅವರು ಇಂತಹ ನಿಷ್ಟಾವಂತ ಜೆಡಿಎಸ್ ಕಾರ್ಯಕರ್ತರಿಂದ ನನ್ನ ಆತ್ಮಸ್ಥೈರ್ಯ ಹೆಚ್ಚಿದೆ ಎಂದರು.
ಸನ್ಮಾದ ವೇಳೆ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಮತ್ತು ನೂರಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೋಲು ಕೊಟ್ಟು ಪೆಟ್ಟು ತಿಂದಿದ್ದ ಸಿಎಂ !
ಏ ಮರಿಸ್ವಾಮಿ, ಬಾರಯ್ಯ ಇಲ್ಲಿ,ನೀನೇ ಇಲ್ಲೆಲ್ಲಾ ಓಡಾಡಿಕೊಂಡು ನನಗೆ ಓಟು ಹಾಕಿಸಬೇಕು’ ಎಂದು ಸಿಎಂ ಸಿದ್ದರಾಮಯ್ಯ ಕರೆದಿದ್ದರು. ಇದಕ್ಕೆಪಂಚಾಯತ್ ಸದಸ್ಯ ಮರಿಸ್ವಾಮಿ “ನಾನು ಈಗ ಜೆಡಿಎಸ್ನಲ್ಲಿದ್ದೀನಿ, ನಿಮಗೆ ಓಟ್ ಹಾಕಲ್ಲ’ ಎಂದು ಮುಖಕ್ಕೆ ಹೊಡೆದ ರೀತಿಯಲ್ಲಿ ಹೇಳಿದ್ದರು.
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ರೋಡ್ ಶೋ ನಡೆಸಿ ಮತಯಾಚಿಸಲು ಬಂದಿದ್ದ ಸಂದರ್ಭದಲ್ಲಿ ಹಳೇ ಕೆಸರೆಯಲ್ಲಿ ನಡೆದ ಈ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಮುಜುಗರಕ್ಕೀಡಾಗುವಂತಾಗಿತ್ತು.
ಬೆದರಿಕೆ
ನನ ಗೆ ಸಿಎಂ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂದು ಮರಿಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ