BJP ಮೈತ್ರಿ ಮೀನಾಮೇಷಕ್ಕೆ ಎಚ್‌ಡಿಕೆ ಆಕ್ರೋಶ

ನಮ್ಮನ್ನು ಸರಿಯಾಗಿ ಬಳಸಿಕೊಳ್ಳಿ, ಪೆಟ್ಟು ಬಿದ್ದರೆ ನೀವೇ ಹೊಣೆ ಬಿಜೆಪಿಗೆ ಎಚ್‌ಡಿಕೆ

Team Udayavani, Mar 19, 2024, 12:31 AM IST

ಬಿಜೆಪಿ ಮೈತ್ರಿ ಮೀನಾಮೇಷಕ್ಕೆ ಎಚ್‌ಡಿಕೆ ಆಕ್ರೋಶಬಿಜೆಪಿ ಮೈತ್ರಿ ಮೀನಾಮೇಷಕ್ಕೆ ಎಚ್‌ಡಿಕೆ ಆಕ್ರೋಶ

ಬೆಂಗಳೂರು: ಮೈತ್ರಿ ಬಗ್ಗೆ ಬಿಜೆಪಿಯ ಮೀನಾಮೇಷದ ನಡೆಗೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ಸರಿಯಾಗಿ ನಮ್ಮನ್ನು ಬಳಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದು ಎಚ್ಚರಿಕೆಯ ಧಾಟಿಯಲ್ಲಿ ಮಾತನಾಡಿ ದ್ದಾರೆ.

ಕೋರ್‌ ಕಮಿಟಿ ಹಾಗೂ ಉಸ್ತುವಾರಿಗಳ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಹಾಸನ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ತ್ರಿಕೋನ ಸ್ಪರ್ಧೆಯಾ ದರೆ ಸುಲಭವಾಗಿ ನಾವು ಗೆಲ್ಲುತ್ತೇವೆ. ಆದರೆ 18 ಕ್ಷೇತ್ರಗಳಲ್ಲಿ ಬಿಜೆಪಿಗೆ ನಮ್ಮ ಪಕ್ಷದಿಂದ ಅನುಕೂಲ ಆಗಲಿದೆ. ಈ ವಿಷಯವನ್ನು ಸಭೆಯಲ್ಲಿ ಚರ್ಚಿಸಿದ್ದೇವೆ. ನಮ್ಮ ಶಕ್ತಿಯನ್ನು ಧಾರೆ ಎರೆದರೆ ಬಿಜೆಪಿಗೆ ಒಳ್ಳೆಯ ಫ‌ಲಿತಾಂಶ ಬರುತ್ತದೆ. ಯಾಕೆಂದರೆ ಕರ್ನಾಟಕದ ರಾಜಕೀಯ ಬೇರೆ, ದೇಶದ ಇತರ ರಾಜ್ಯಗಳ ರಾಜಕೀಯವೇ ಬೇರೆ. ಇದನ್ನು ಬಿಜೆಪಿ ವರಿಷ್ಠರ ಗಮನಕ್ಕೆ ತನ್ನಿ ಎಂದು ಮುಖಂಡರು ನನ್ನ ಮೇಲೆ ಒತ್ತಡ ಹಾಕಿದ್ದಾರೆ. ಬಿಜೆಪಿ ಸರಿಯಾಗಿ ನಮ್ಮನ್ನು ಬಳಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದರು.

ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವವರೆಗೂ ಮಾತನಾಡುವುದಿಲ್ಲ. ಆದರೆ ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದರು. ನಾವು ಬಿಜೆಪಿಯಿಂದ 6-7 ಸೀಟನ್ನೇನೂ ಕೇಳಿಲ್ಲ. ನಾವು ಕೇಳಿರುವುದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3-4 ಸೀಟು ಕೊಡುತ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರಕ್ಕಾಗಿ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಂಡಿದ್ದು
ನಮ್ಮ ಮತ್ತು ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು ನನ್ನ ವಿನಂತಿ. ನಮ್ಮ ಗುರಿ ನಾವು ಮುಟ್ಟಬೇಕು. ನಮ್ಮ ಗುರಿ ಅಧಿಕಾರ ಅಲ್ಲ, ರಾಜ್ಯದ ಅಭಿವೃದ್ಧಿ ಮಾತ್ರ. 75 ವರ್ಷಗಳಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಮೈತ್ರಿ ಕಾರಣ ನಮ್ಮ ರಾಜ್ಯದ ಅಭಿವೃದ್ಧಿಗೆ ಪರಿಹಾರ ತರಬೇಕು. ನಿತ್ಯ ಕೇಂದ್ರದ ಮೇಲೆ ಆರೋಪ ಮಾಡುವ ಕಾಂಗ್ರೆಸ್‌ 45 ವರ್ಷ ರಾಜ್ಯ, ದೇಶವನ್ನು ಆಳಿದೆ. ಕಾಂಗ್ರೆಸ್‌ ನ ಕೊಡುಗೆ ರಾಜ್ಯಕ್ಕೆ ಏನು? ನಿಮ್ಮಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಇದನ್ನು ಸರಿ ಮಾಡಲು ನಮ್ಮ ಮೈತ್ರಿ ಆಗಿದೆ. ಲೋಕಸಭೆಯಲ್ಲಿ ನಮ್ಮ ದನಿ ಇರಬೇಕು ಎಂದು ಕುಮಾರಸ್ವಾಮಿ ಇದೇ ವೇಳೆ ಹೇಳಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.