ಎಚ್ಡಿಕೆ-ಸಿದ್ದು ಮಾತು ಅನಗತ್ಯ: ಬಾಲಕೃಷ್ಣ
Team Udayavani, Sep 26, 2019, 3:00 AM IST
ಬೆಂಗಳೂರು: ಕುಮಾರಸ್ವಾಮಿ ಅವರು ಅಧಿಕಾರ ಸಿಕ್ಕಾಗ ಸರಿಯಾಗಿ ಬಳಕೆ ಮಾಡಿಕೊಳ್ಳದೆ ಈಗ ಮಾತನಾಡುತ್ತಿ ರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ದೂರಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಇದೀಗ ಕಾಂಗ್ರೆಸ್ ಜೆಡಿಎಸ್ ನಡುವೆ ಡೈವೋರ್ಸ್ ಆಗಿದೆ. ಹಾಗೆ ನೋಡಿದರೆ ಕಾಂಗ್ರೆಸ್ ಶಾಸಕರು ಮಾತ್ರವಲ್ಲ, ಜೆಡಿಎಸ್ ಶಾಸಕರೂ ರಾಜೀನಾಮೆ ಕೊಟ್ಟರಲ್ಲ. ಅವರೂ ಸಿದ್ದರಾಮಯ್ಯ ಮಾತು ಕೇಳಿ ಕೊಟ್ಟರಾ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ- ಸಿದ್ದರಾಮಯ್ಯ ಅವರ ನಡುವೆ ಹದ್ದು-ಗಿಣಿ ಮಾತುಗಳು ಅನಗತ್ಯ.
ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ವೈಯಕ್ತಿಕವಾಗಿ ವಿರೋಧ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲಾಗಿತ್ತು ಎಂದು ಹೇಳಿದರು. “ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಉಪ ಚುನಾವಣೆ ಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂ ಡ್ನಿಂದ ಒತ್ತಡವಿದೆ. ಆದರೆ, ನಾನು ಸಿದ್ಧವಿಲ್ಲ. ನಾನು ಮಾಗಡಿ ಯವನು, ಅಲ್ಲೇ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಊರು ಬಿಟ್ಟು ಬಂದ ಗೌಡನ ಕಥೆಯಾಗುತ್ತದೆ. ನಾನು ಮಾಗಡಿ ಗೌಡನಾಗಿಯೇ ಇರುತ್ತೇನೆ’ ಎಂದು ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ