ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು: ಸರ್ಕಾರದ ವಿರುದ್ಧ ಎಚ್ ಡಿಕೆ ಟೀಕೆ
Team Udayavani, Apr 29, 2021, 5:20 PM IST
ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ:ಸಚಿವ ಉಮೇಶ ಕತ್ತಿ ‘ಸಾಯಲಿ’ ಹೇಳಿಕೆ ದುರ್ದೈವದ ಸಂಗತಿ : ಬಿ.ಸಿ.ಪಾಟೀಲ್
18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿ ಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದು ಎಚ್ ಡಿಕೆ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…