ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉತ್ತರ ಕನ್ನಡ ಜನರ ಹೋರಾಟ: ಬೆಂಬಲ ನೀಡಿದ ಕುಮಾರಸ್ವಾಮಿ
Team Udayavani, Jul 25, 2022, 9:49 AM IST
ಬೆಂಗಳೂರು: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸೇನೆ ಸೇರುವ ಯುವಕ ಯುವತಿಯರಿಗೆ ಉಚಿತ ತರಬೇತಿ ನೀಡುವ ಮಾಜಿ ಸೈನಿಕರು
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರಕಾರ ಕಣ್ತೆರೆಯಲೇಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
— H D Kumaraswamy (@hd_kumaraswamy) July 25, 2022
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಎಚ್ ಡಿಕೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ