BJP ಅಧಿಕೃತ ವಕ್ತಾರರಾಗಿ ಎಚ್ ಡಿಕೆ ಕೆಲಸ ಮಾಡುತ್ತಿದ್ದಾರೆ: ವೀರಪ್ಪ ಮೊಯ್ಲಿ
Team Udayavani, Sep 7, 2023, 8:23 PM IST
ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷರು ಅತಂತ್ರರಾಗಿದ್ದು, ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಜತೆಗೆ ವಿರೋಧ ಪಕ್ಷದ ನಾಯಕ ಇಲ್ಲದ ಬಿಜೆಪಿಗೆ ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ಬಿಜೆಪಿ ಅಧಿಕೃತ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಭಾರತ್ ಜೋಡೋ ಯಾತ್ರೆ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಗುರುವಾರ ಸಂಜೆ ಪಕ್ಷದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಇಂಡಿಯಾ ಒಕ್ಕೂಟದಿಂದ ದೂರ ಉಳಿದಿರುವ ಜೆಡಿಎಸ್ ಬಗ್ಗೆ ವಾಗ್ದಾಳಿ ನಡೆಸಿದರು.
ಜೆಡಿಎಸ್ನವರ ಡಿಕ್ಷನರಿಯಲ್ಲಿ ಸ್ವಾತಂತ್ರ್ಯ ಎಂಬ ಶಬ್ದವೇ ಇಲ್ಲ ಎಂದು ಗೇಲಿ ಮಾಡಿ, ಅವರು ಯಾವಾಗಲೂ ಕೂಡ ಕೈ ಕೊಡುತಾರೆ, ನಮ್ಮ ಜತೆ ಇದ್ದು ನಿಮ್ಮನ್ನು ಗೆಲ್ಲಿಸುತ್ತೇವೆಂದು ಹೇಳಿ ಕಾಂಗ್ರೆಸ್ ವಿರುದ್ದ ಮಾಡಿದರು. ಅವರೂ ಸೋತರು. ಒಂದು ಸೀಟು ಮಾತ್ರ ಗೆದ್ದು ನಾವು ಕೂಡ ಸೋತೆವು. ಕಳೆದ ಲೋಕಸಭಾ ಚುನಾವಣೆ ವೇಳೆ ಆಗಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಒಂದು ರೀತಿ ಅವರಿಗೂ ಲಾಭ ಆಗದೇ, ನಮಗೂ ಲಾಭ ಆಗದೇ ಮಂಗ, ಮೇಕೆ ಕಥೆಯಂತೆ ಆಯಿತು ಎಂದು ಕಿಡಿಕಾರಿದರು.
ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್, ಕುಮಾರಸ್ವಾಮಿರನ್ನು ಸಿಎಂ ಮಾಡಿದ್ದು ಕಾಂಗ್ರೆಸ್, ಆದರೆ ಕುಮಾರಸ್ವಾಮಿಗೆ ಮೋದಿ ಮೇಲೆ ಆಸೆ. ಇಂಡಿಯಾ ಒಕ್ಕೂಟ ಗೆಲ್ಲುವುದಿಲ್ಲ ಅಂತ ಅವರ ಮನಸ್ಸು ಈಗ ಮೋದಿ ಕಡೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು