ಕೋವಿಡ್ ವಿಷಯಲ್ಲಿ ಸರ್ಕಾರ ಯಾವ ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಕೆಲಸ ಮಾಡಿಲ್ಲ: ಡಾ. ಸುಧಾಕರ್
Team Udayavani, Apr 27, 2021, 6:42 PM IST
ಬೆಂಗಳೂರು : ಕೋವಿಡ್ ವಿಷಯದಲ್ಲಿ ಸರ್ಕಾರ ಯಾವ ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಕೆಲಸ ಮಾಡಿಲ್ಲ. ಯಾವುದಾದ್ರೂ ರಾಜ್ಯ ಪಾರದರ್ಶಕವಾಗಿ ಅಂಕಿ ಅಂಶಗಳನ್ನು ಜನರ ಮುಂದೆ ಇಡುತ್ತಿದ್ರೆ ಅದು ನಮ್ಮ ರಾಜ್ಯ.ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ವಿರೋಧ ಪಕ್ಷದ ನಾಯಕರು ಅನಗತ್ಯವಾಗಿ ಆರೋಪ ಮಾಡಬಾರದು ಆಡಳಿತ ಪಕ್ಷ ವಿರೋಧ ಪಕ್ಷ ಅಂತ ಇರಬಾರದು ಎಲ್ಲಾ ಒಟ್ಟಿಗೆ ಇರಬೇಕು ಒಬ್ಬ ವ್ಯಕ್ತಿ ಇದನ್ನು ಮಾಡಲು ಸಾಧ್ಯವಿಲ್ಲ ಎಲ್ಲರೂ ಕೈ ಜೋಡಿಸಬೇಕು ಎಂದರು.
ಇವತ್ತು ರಾತ್ರಿ 9 ಗಂಟೆಯಿಂದ ನಿರ್ಬಂಧ ಆರಂಭ ಆಗುತ್ತದೆ. 14 ದಿನ ನಿರ್ಬಂಧ ಮಾಡಿಕೊಂಡರೆ ಕೋವಿಡ್ ಚೈನ್ ಬ್ರೇಕ್ ಆಗುತ್ತದೆ. ಮಹಾರಾಷ್ಟ್ರದಲ್ಲಿ ಕರ್ಫ್ಯೂ ವಿಧಿಸಿದ ಮೇಲೆ ಕಡಿಮೆ ಆಗಿದೆ. ನಮ್ಮಲ್ಲಿ 16 ಸಾವಿರದ್ದಷ್ಟು ಪ್ರಕರಣ ಬರ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ 1100 ಕಾಲ್ ಸೆಂಟರ್ ಓಪನ್ ಆಗುತ್ತದೆ. ಇದರಲ್ಲಿ ಯಾವ ವ್ಯಕ್ತಿ ಹೇಗೆ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಹೇಳುತ್ತಾರೆ ಹೋಮ್ ಐಸೋಲೇಶನ್ ಇರುವವರಿಗೆ ಮೆಡಿಕಲ್ ಅಡ್ವೈಸ್ ನೀಡುತ್ತಾರೆ .ಇದಕ್ಕೆ ಅಂದಾಜು 20 ಕೋಟಿ ಬೇಕಾಗುತ್ತದೆ ಒಟ್ಟು ಆರು ತಿಂಗಳು ಕಾರ್ಯ ನಿರ್ವಹಣೆ ಮಾಡುತ್ತದೆ ಎಂದರು.
ಇದನ್ನೂ ಓದಿ : ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ
ಹೊಸ ಪ್ರಕರಣ ಯಾವ ರೀತಿಯಲ್ಲಿ ಇಳಿಕೆ ಆಗಬೇಕು ಎನ್ನುವ ಹಿನ್ನಲೆಯಲ್ಲಿ ಕರ್ಫ್ಯೂ ವಿಧಿಸಿದ್ದಾರೆ ಈ ಸಮಯದಲ್ಲಿ ಎಲ್ಲರೂ ಮನೆಯಲ್ಲಿ ಇರಬೇಕು, ಅನಗತ್ಯವಾಗಿ ಓಡಾಡಬಾರದು . ಪಾಸಿಟಿವ್ ಬಂದವರು ಬೇರೆಯವರ ಜೊತೆಗೆ ಬೆರೆಯಬಾರದು. ಹೀಗೆ ಮಾಡಿದರೆ ನೀವು ಸೂಪರ್ ಸ್ಪ್ರೇಡರ್ ಆಗುತ್ತಿರಿ. ಇದು ಕಾನೂನಿನ ದೃಷ್ಟಿಯಿಂದ ಹಾಗೂ ಆರೋಗ್ಯ ದೃಷ್ಟಿಯಿಂದ ಸರಿ ಅಲ್ಲ. ಸೂಕ್ತ ವ್ಯವಸ್ಥೆ ಇಲ್ಲ ಅಂದರೆ ಸ್ಥಳೀಯ ಕೋವಿಡ್ ಕೇರ್ ಸೆಂಟರ್ ಗೆ ಹೋಗಿ ದಾಖಲು ಆಗಿ ಎಂದು ಸಲಹೆ ನೀಡಿದರು.
ಆಕ್ಸಿಜನ್ ಬೇಕಾದವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ 2000 ರಿಂದ 3000 ಬೆಡ್ ವ್ಯವಸ್ಥೆ ಮಾಡುತ್ತೇವೆ. ವಿಕ್ಟೋರಿಯಾ, ವಾಜಪೇಯಿ ಆಸ್ಪತ್ರೆ ಸೇರಿದಂತೆ ಎಲ್ಲಾ ಕಡೆ ಬೆಡ್ ಹೆಚ್ಚಿಗೆ ಕ್ರಮ ಕೈಗೊಳ್ಳುತ್ತೇವೆ. ಐಸಿಯು ಹಾಸಿಗೆ ಸಿಗದೆ ಪರದಾಡುವುದನ್ನು ತಪ್ಪಿಸಬೇಕು. ಆರೋಗ್ಯ ವ್ಯವಸ್ಥೆ ಬಲಿಷ್ಠವಾಗಿ ಇರಬೇಕು ನಾವು ಸಮರ್ಥವಾಗಿ ಇರಬೇಕು ಎಂದು ರಾಜ್ಯದ ಎಲ್ಲಾ ಕಡೆ ಮೇಕ್ ಶಿಫ್ಟ್ ಆಸ್ಪತ್ರೆ ಇರಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.
ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡುವುದಕ್ಕೆ 50 ರಿಂದ 100 ಹಾಸಿಗೆ ಇರಬೇಕು. 20 ಹಾಸಿಗೆಗೆ ವೆಂಟಿಲೇಟರ್ ಇರುವ ಹಾಗೆ ವ್ಯವಸ್ಥೆ ಮಾಡುವ ಚಿಂತನೆ ಇದೆ. 40000 ಪೋರ್ಟಬಲ್ ಆಕ್ಸಿಜನ್ ಕಾನ್ಸಂಟ್ರೇಶನ್ ಬೇಕಾಗುತ್ತದೆ. ಇದನ್ನು ಬೇರೆ ಕಡೆಯಿಂದ ತರಿಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆ, ಚೌಟ್ರಿ ಎಲ್ಲಾ ಕಡೆ ಸೂಕ್ತ ಸೌಲಭ್ಯ ಇರುವ ಕಡೆ ಜಿಲ್ಲಾಧಿಕಾರಿ 14 ದಿನಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ತಾಕೀತು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ