ಗರ್ಭಕೋಶ ತೆಗೆಸಿಕೊಂಡವರ ಕಣ್ಣೀರ ಕಥೆ; ಆರೋಗ್ಯ ಸಮಸ್ಯೆಯಿಂದ ಕಂಗಾಲು
ಚಿಕಿತ್ಸೆಗೂ ಹಣ ಇಲ್ಲದೆ ಸಂಕಷ್ಟ
Team Udayavani, Apr 19, 2022, 10:40 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ನಾಲ್ಕೈದು ವರ್ಷಗಳ ಹಿಂದೆ ಉತ್ತರ ಕರ್ನಾಟಕ ಭಾಗದಲ್ಲಿ ಕೆಲವು ಸರಕಾರಿ ವೈದ್ಯರು ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದ ಮಹಿಳೆಯರ ಗರ್ಭಕೋಶಗಳನ್ನು ಹಣದಾಸೆಗಾಗಿ ತೆಗೆದಿದ್ದ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಂದು ಗರ್ಭಕೋಶ ಕಳೆದುಕೊಂಡ ಮಹಿಳೆಯರು ಇಂದು ಬೀದಿಪಾಲಾಗಿದ್ದಾರೆ.
ಕಲಬುರಗಿ, ಹಾವೇರಿ, ಬೀದರ್, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಶೇ.40ರಷ್ಟು ಬಡ ಹಾಗೂ ಲಂಬಾಣಿ ಹೆಣ್ಣುಮಕ್ಕಳಲ್ಲಿ ಗರ್ಭಕೋಶವೇ ಇಲ್ಲದಂತಾಗಿದೆ. ಅಲ್ಲದೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗದೆ ನಾನಾ ಆರೋಗ್ಯ ಸಮಸ್ಯೆಯನ್ನೂ ಅವರು ಎದುರಿಸುತ್ತಿದ್ದು, ಚಿಕಿತ್ಸೆಗೂ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಪೈಕಿ 40 ವರ್ಷದೊಳಗಿನ ಮಹಿಳೆಯರೇ ಹೆಚ್ಚು.
ಗರ್ಭಕೋಶ ತೆಗೆಸಿಕೊಂಡ ಈ ಮಹಿಳೆಯರಿಗೆ ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ನೀರು ತುಂಬಿದ ಬಿಂದಿಗೆ ಎತ್ತಲಾಗದಷ್ಟು ನಿಶ್ಶಕ್ತಿ, ಕೂದಲು ಉದುರುವುದು, ಸೊಂಟ ನೋವು, ನರ ದೌರ್ಬಲ್ಯ, ಬೆನ್ನು ನೋವು ಸೇರಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂಥವರಿಗೆ ಸರಕಾರವು ಸ್ವ-ಉದ್ಯೋಗ ಅಥವಾ ಪ್ಯಾಕೇಜ್ ರೂಪದಲ್ಲಿ ಸಹಾಯಧನ ಘೋಷಿಸಬೇಕೆಂದು ಮಹಿಳಾ ಸಂಘಟನೆಗಳು ಆಗ್ರಹಿಸಿವೆ.
ಇದನ್ನೂ ಓದಿ:ಜಹಾಂಗೀರ್ ಪುರಿ ಹಿಂಸಾಚಾರ : ದೆಹಲಿ ಪೊಲೀಸರಿಗೆ ಓವೈಸಿ ಗಂಭೀರ ಪ್ರಶ್ನೆ
ಏನಾಗಿತ್ತು?
ಮುಗ್ಧ, ಅವಿದ್ಯಾವಂತ ಕೂಲಿ ಕಾರ್ಮಿಕ ಹೆಣ್ಣುಮಕ್ಕಳು ಹೊಟ್ಟೆ ನೋವು, ಮುಟ್ಟು ಸಮಸ್ಯೆ, ಬಿಳಿ ಮುಟ್ಟು, ಉರಿಮೂತ್ರದಂಥ ಸಹಜ ಸಮಸ್ಯೆಗಳ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದರು. ಇವರಿಗೆ ಕೆಲವು ಕಡೆ ಸ್ಕ್ಯಾನಿಂಗ್ ಮಾಡಿದರೆ, ಇನ್ನೂ ಕೆಲವೆಡೆ ಸ್ಕ್ಯಾನಿಂಗ್ ಮಾಡದೇ ಗರ್ಭ ಊತ, ಅಪೆಂಡಿಕ್ಸ್, ಗರ್ಭ ಕ್ಯಾನ್ಸರ್, ಗರ್ಭ ಚೀಲದ ಮೇಲೆ ಗುಳ್ಳೆಯಾಗಿದೆ, ಪ್ರಾಣಕ್ಕೆ ಅಪಾಯವೆಂದು ಭಯ ಪಡಿಸಿ, ಹೆಣ್ಣುಮಕ್ಕಳ ಗರ್ಭಕೋಶವನ್ನು ತೆಗೆಯಲಾಗಿತ್ತು.
ಬಡವರು ಅಥವಾ ದಲಿತರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ, ಸರಕಾರದಿಂದ 1.50ರಿಂದ 2 ಲಕ್ಷ ರೂ. ಸಹಾಯಧನ ಬರುತ್ತದೆ. ಇದರ ಬಗ್ಗೆ ಈ ಲಂಬಾಣಿ ಜನಾಂಗದ ಹೆಣ್ಣುಮಕ್ಕಳಿಗೆ ಯಾವ ಮಾಹಿತಿಯೂ ಇರಲಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 20 ವರ್ಷದವರನ್ನು 40 ವರ್ಷವೆಂದು ದಾಖಲೆಗಳಲ್ಲಿ ನಮೂದಿಸಿ, ವೈದ್ಯರು ಹಣ ದೋಚಿದ್ದಾರೆ ಎಂದೂ ಹೇಳಲಾಗಿದೆ.
ಅನಾವಶ್ಯಕವಾಗಿ ಗರ್ಭಕೋಶ ತೆಗೆಯು ವುದು ಅಪರಾಧ. ಅಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಹಾಗೂ ಮುಂದಿನ ದಿನಗಳಲ್ಲಿ ಹೀಗೆ ಆಗದಂತೆ ಎಚ್ಚರ ವಹಿಸುತ್ತೇವೆ.
– ರಣದೀಪ್, ಆಯುಕ್ತ, ಆರೋಗ್ಯ ಇಲಾಖೆ
ಉತ್ತರ ಕರ್ನಾಟಕದಲ್ಲಿ ಗರ್ಭಕೋಶ ತೆಗೆಯುವ ಪ್ರಕರಣ ಹೆಚ್ಚು. ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಿಂದ ಇಂಥ ಕೃತ್ಯಗಳು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಯೋಜನೆ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು.
– ನಾಗಲಕ್ಷ್ಮೀ ಬಾಯಿ, ಮಾಜಿ ಅಧ್ಯಕ್ಷೆ, ಮಹಿಳಾ ಆಯೋಗ
– ಭಾರತಿ ಸಜ್ಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ