ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ
Team Udayavani, Jul 7, 2022, 1:42 PM IST
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಗುರುವಾರ ಬೆಂಗಳೂರು ಚಲೋ ನಡೆಸಿ ಪ್ರತಿಭಟನೆಗೆ ಇಳಿದಿದ್ದಾರೆ. ಈ ಹಿನ್ನಲೆಯಲ್ಲಿಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಸಚಿವ ಡಾ. ಸುಧಾಕರ್ ಈ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರೋ 21ಸಾವಿರ ಜನ ಗುತ್ತಿಗೆ ನೌಕರರಿದ್ದಾರೆ.ಇದು ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ. ಕೇಂದ್ರ ಸರ್ಕಾರದ ಅನುದಾನದ ಕಾರ್ಯಕ್ರಮ. ಆರೋಗ್ಯ ದೃಷ್ಟಿಯಿಂದ ಆರೋಗ್ಯ ಕಾರ್ಯಕ್ರಮ ರಾಜ್ಯ ಸರ್ಕಾರದ ಸಹಭಾಗಿತ್ವ ಕಾರ್ಯಕ್ರಮ ಸೇರಿದೆ.ಅನೇಕ ವರ್ಷಗಳಿಂದ ಯೋಜನೆಗಳು ನಡೆಯುತ್ತಿದೆ.ಕೆಲವು ಸಂಘದ ಪದಾಧಿಕಾರಿಗಳು ಕೆಲವು ಬೇಡಿಕೆ ಇಟ್ಟು ಫ್ರೀಡಮ್ ಪಾರ್ಕಲ್ಲಿ ಜಮಾಯಿಸಿದ್ದಾರೆ.ಅದರ ಹಿನ್ನೆಲೆ ಅಧಿಕಾರಿಗಳ ಜೊತೆ ಕೂಲಂಕಷವಾಗಿ ಚರ್ಚೆ ಮಾಡಿದ್ದೇನೆ. ಪ್ರತಿಯೊಬ್ಬ ಸಿಬ್ಬಂದಿ ಮೇಲೆ ಅಪಾರ ಗೌರವ ಇದೆ. ಕೋವಿಡ್ ನಂತಹ ಸಾಂಕ್ರಾಮಿಕ ರೋಗ ಬಂದಾಗಲೂ ತ್ಯಾಗ ಕೆಲಸ ಮಾಡಿದ್ದಾರೆ. ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಬೇಡಿಕೆ ಈಡೇರಿಕೆ ಬಗ್ಗೆ ಕ್ರಮ ಕೈಗೊಂಡಿದ್ದೇನೆ ಎಂದರು.
ಇನ್ನೂ ಕೆಲವು ಬೇಡಿಕೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ.ಅದಕ್ಕೆ ಹಣಕಾಸಿನ ಅವಶ್ಯಕತೆ ಇದೆ.ಕೇಂದ್ರದ ಅನುಮತಿ ಬೇಕಿದ್ದು ಅದಕ್ಕೆ ಅನುಮತಿ ದೊರೆತಿಲ್ಲ.ನ್ಯಾಯ ಸಮ್ಮತ ಬೇಡಿಕೆ ಈಡೇರಿಕೆ ಬಗ್ಗೆ ಕ್ರಮ ಕೈಗೊಳ್ತೇನೆ.ಒಂದು ಗಂಟೆಗೆ ನಾನೇ ಫ್ರೀಡಂ ಪಾರ್ಕ್ ಗೆ ಹೋಗುತ್ತೇನೆ. ಆರೋಗ್ಯ ಮತ್ತು ವೈದ್ಯಕೀಯ ಎರಡೂ ಇಲಾಖೆ ಅಧಿಕಾರಿಗಳ ಜೊತೆ ಹೋಗುತ್ತೇನೆ. ಪ್ರತಿಯೊಂದು ಇಲಾಖೆಯಲ್ಲೂ ಗುತ್ತಿಗೆ ಸಿಬ್ಬಂದಿಗಳಿದ್ದಾರೆ. ಅವರಿಗೆ ಪೂರಕವಾಗಿ ಸ್ಪಂದನೆ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್