ಹೃದಯ ವೈಫಲ್ಯತೆ: ಕುಮಾರೇಶ್ವರ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
Team Udayavani, Jun 3, 2021, 5:31 PM IST
ಬಾಗಲಕೊಟೆ: ನಗರದ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಹೃದಯರೋಗ ವಿಭಾಗದಲ್ಲಿ ನೂತನ ತಂತ್ರಜ್ಞಾನದೊಂದಿಗೆ 75 ವರ್ಷದ ಹೃದ್ರೋಗಿಗೆ ಹೃದಯರೋಗ ತಜ್ಞ ಡಾ|ಸಾಗರ ದೇಸಾಯಿ ನೇತೃತ್ವದ ತಂಡ ಯಶಸ್ವಿಯಾಗಿ ಅಳವಡಿಸಿದೆ.
ಕಾರ್ಡಿಯಾಲಜಿ ವಿಭಾಗದಲ್ಲಿ ಅತ್ಯಂತ ಅಪರೂಪ ಮತ್ತು ಕ್ಲಿಷ್ಟಕರ ಚಿಕಿತ್ಸೆ ಇದಾಗಿದ್ದು, ಹುನಗುಂದ ತಾಲೂಕಿನ ಕಳ್ಳಿಗುಡ್ಡ ಗ್ರಾಮದ 75 ವರ್ಷದ ವೃದ್ಧರೊಬ್ಬರು ಹೃದಯಾಘಾತದ ನಂತರ ತೀವ್ರ ಹೃದಯ ವೈಫಲ್ಯತೆಯಿಂದ ಬಳಲುತ್ತಿದ್ದು, ವೆಂಟ್ರಿಕ್ಯುಲರ್ ಟೆಕಿಕಾರ್ಡಿಯಾದಿಂದಾಗಿ ಹೃದಯ ಸ್ಥಂಬನಕ್ಕೊಳಗಾಗಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರಿಗೆ ವಿಶೇಷ ಪರೀಕ್ಷೆಯ ನಂತರ ಈ ಕಾಯಿಲೆ ಗುರುತಿಸಿ 8 ಲಕ್ಷಕ್ಕೂ ಹೆಚ್ಚು ವೆಚ್ಚದ ಈ ಉಪಕರಣ ಕುಮಾರೇಶ್ವರ ಆಸ್ಪತ್ರೆಯ ಇಎಸ್ಐ ಆರೋಗ್ಯ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಮಾಡಿ ಪ್ರಾಣಾಪಾಯದಿಂದ ಪಾರುಮಾಡಲಾಯಿತು. ಈ
ಸಾಧನ ಎದೆಯ ಗೂಡಿನಲ್ಲಿ ಅಳವಡಿಸಲಾಗಿದ್ದು, ವೈರಗಳ ಮೂಲಕ ಹೃದಯದ ಸ್ನಾಯುಗಳಿಗೆ ಜೋಡಿಸಲಾಗುತ್ತದೆ. ಈ ಚಿಕಿತ್ಸೆಯು ಹೃದಯದ ವೈಫಲ್ಯತೆ ಗುಣಪಡಿಸುವುದಲ್ಲದೇ ಹೃದಯ ಬಡಿತ ವಿಪರೀತವಾಗಿ ಹೆಚ್ಚಾದಾಗಿ ಸ್ವಯಂಚಾಲಿತವಾಗಿ
ಶಾಕ್ ನೀಡುವುದರ ಮುಖಾಂತರ ಸರಿಪಡಿಸುವುದು ಈ ಸಾಧನದ ವೈಶಿಷ್ಟವಾಗಿದೆ ಎಂದು ಡಾ|ಸಾಗರ ದೇಸಾಯಿ
ಸಿಆರ್ಟಿ-ಡಿ ಕುರಿತು ಹೇಳಿದರು.
ಯಶಸ್ವಿ ಚಿಕಿತ್ಸೆಗೆ ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ)
ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ|ಅಶೋಕ ಮಲ್ಲಾಪುರ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ