ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ವರುಣನ ಅಬ್ಬರ
Team Udayavani, Jul 14, 2021, 3:57 PM IST
ಚಿಕ್ಕಮಗಳೂರು : ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಹಲವು ಕಡೆಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ.
ಇನ್ನು ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ಸೇತುವೆ ಮಟ್ಟದಲ್ಲಿ ಹೇಮಾವತಿ ನದಿ ನೀರು ಹರಿಯುತ್ತಿದ್ದು, ತುಂಗಾ, ಭದ್ರಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ.