ರಾಜ್ಯದ ಹಲವೆಡೆ ಮಳೆ,ಸಿಡಿಲಿಗೆ ಕುರಿಗಾಹಿ ಬಲಿ
Team Udayavani, May 18, 2018, 6:55 AM IST
ಮಂಗಳೂರು/ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟಿದ್ದಾನೆ.
ಮೃತನನ್ನು ರೋಣದ ಹಳಕಾರಿ ಕಾಲೋನಿ ನಿವಾಸಿ ಸೋಮಶೇಖರ ಕೊಳ್ಳಿ (24) ಎಂದು ಗುರುತಿಸಲಾಗಿದೆ. ಕುರಿ ಮೇಯಿಸುತ್ತಿರುವಾಗ ಸಿಡಿಲು ಬಡಿದಿದೆ. ಇದೇ ವೇಳೆ, ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ 8 ಕುರಿಗಳು ಸಿಡಿಲಿಗೆ ಆಹುತಿಯಾಗಿವೆ.
ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶ, ಬಳ್ಳಾರಿ ಜಿಲ್ಲೆ ಹೊಸಪೇಟೆ ಸುತ್ತಮುತ್ತ ಗುಡುಗು ಸಹಿತ ಸುರಿದ ಮಳೆಗೆ ಗಿಡಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕುಂದಾಪುರ, ಶಿರಹಟ್ಟಿ ಮತ್ತು ಬೇಗೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ ತಲಾ 3 ಸೆಂ.ಮೀ.ಮಳೆ ಸುರಿಯಿತು.
ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 41 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಇನ್ನೆರಡು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್