ವಿಟ್ಲ: ಸಾರಡ್ಕ ಬಳಿ ಗುಡ್ಡ ಕುಸಿತ: ಕರ್ನಾಟಕ-ಕೇರಳ ಸಂಚಾರ ಬಂದ್
Team Udayavani, Jul 5, 2022, 10:57 AM IST
ವಿಟ್ಲ: ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಕಲ್ಲಡ್ಕ – ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಸಾರಡ್ಕ ಬಳಿ ಗುಡ್ಡ ಕುಸಿದುಬಿದ್ದಿದೆ. ಇದರ ಪರಿಣಾಮ ಕರ್ನಾಟಕ – ಕೇರಳ ಸಂಚಾರ ಬಂದ್ ಆಗಿದೆ.
ಭಾರಿ ಮಳೆಯ ಪರಿಣಾಮ ಗುಡ್ಡಕುಸಿದು ರಸ್ತೆಯಲ್ಲಿ ಮಣ್ಣು, ಮರಗಿಡಗಳು ತುಂಬಿದ್ದು, ವಿಟ್ಲ ಮಾರ್ಗವಾಗಿ ಪೆರ್ಲ, ಬದಿಯಡ್ಕ, ಕಾಸರಗೋಡು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣಿನಡಿಯಲ್ಲಿ ಬೈಕ್ ಸಿಲುಕಿಕೊಂಡಿದೆ ಎನ್ನಲಾಗಿದೆ. ರಸ್ತೆ ಮಧ್ಯೆ ದೊಡ್ಡ ರಂದ್ರ ನಿರ್ಮಾಣವಾಗಿದ್ದು, ರಸ್ತೆಯ ನೀರು ಅದರೊಳಗೆ ಇಳಿಯುತ್ತಿದ್ದು ಸ್ಥಳೀಯರಲ್ಲಿ ಆಂತಂಕ ಸೃಷ್ಟಿಸಿದೆ.
ಕುಡ್ತಮುಗೇರು : ಏರುತ್ತಿರುವ ನೆರೆ ನೀರು : ಸಂಚಾರ ಬಂದ್ ಸಾಧ್ಯತೆ
ವಿಟ್ಲ ಸಾಲೆತ್ತೂರು ಮುಡಿಪು ರಸ್ತೆಯ ಕುಡ್ತಮುಗೇರು ಬಳಿ ನದಿ ನೀರು ಮೇಲೇರುತ್ತಿದ್ದು ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆರೆ ನೀರು ಏರಿಕೆಯಾಗುತ್ತಿದ್ದು ವಾಹನ ಸಂಚಾರ ದುಸ್ತರವಾಗಿದೆ.
ಇದನ್ನೂ ಓದಿ: ಬೆಳ್ತಂಗಡಿ: ಪತ್ನಿಯಿಂದಲೇ ಪತಿಯ ಕೊಲೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ