ಭಾರಿ ಮಳೆಗೆ ಬೆಂಗಳೂರು ತತ್ತರ; ದೇವಾಲಯ,ಮನೆಗಳಿಗೆ ನುಗ್ಗಿದ ನೀರು
Team Udayavani, May 28, 2017, 9:38 AM IST
ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದ್ದು, ಕಳೆದೊಂದು ವಾರದಿಂದ ಸುರಿದ ಮಳೆಗೆ 400ಕ್ಕೂ ಹೆಚ್ಚು ಮರ, ಕೊಂಬೆಗಳು ಧರೆಗುರುಳಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದೂ ಮಳೆಯಾಗುವ ಸಾಧ್ಯತೆಗಳಿದ್ದು ತಗ್ಗು ಪ್ರದೇಶದ ಜನರಲ್ಲಿ ತೀವ್ರ ಆತಂಕ ನಿರ್ಮಾಣವಾಗಿದೆ.
ಶುಕ್ರ ವಾರ ಸುರಿದ ಭಾರಿ ಮಳೆ ಹಾಗೂ ಶನಿವಾರ ಆಲಿಕಲ್ಲು ಸಮೇತ ಸುರಿದ ಮಳೆಗೆ 400ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ತಗ್ಗು ಪ್ರದೇಶಗಳಲ್ಲಿರುವ ನೂರಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಗಿದೆ. ಜತೆಗೆ ನಗರದಲ್ಲಿ 80ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ವ್ಯತ್ಯಯವಾಗಿದೆ.
ಹೊಸಕೆರೆಹಳ್ಳಿಯ ದತ್ತಾತ್ರೇಯ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿ ಸಂಪೂರ್ಣ ಜಲವೃತವಾಗಿತ್ತು. 5 ಅಡಿಯಷ್ಟು ಕೊಳಚೆ ನೀರು ನಿಂತಿದ್ದು ದೇವವರ ವಿಗ್ರಹವೂ ನೀರಲ್ಲಿ ಮುಳುಗಿ ಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ದೇವಸ್ಥಾನ ಮಂಡಳಿಯವರು ಸೇರಿಕೊಂಡು ಕೊಚ್ಚೆ ನೀರನ್ನು ಹೊರಹಾಕಿ ಸ್ವಚ್ಛತಾ ಕಾರ್ಯ ಕೆಲಸ ಮಾಡುತ್ತಿದ್ದಾರೆ.ಪ್ರದೇಶದ 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಪರದಾಡಬೇಕಾಗಿದೆ.
ಶುಕ್ರವಾರ ನಗರದ ಹಲವೆಡೆ ಮರಗಳು ವಾಹನ ಸವಾರರ ಮೇಲೆ ಬಿದ್ದ ಪರಿಣಾಮ ನಾಲ್ಕೈದು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ವಾಹನಗಳುಜಖಂಗೊಂಡಿವೆ. ಗಾಂಧಿ ಬಜಾರ್, ರಾಜಭವನ, ಕಸ್ತೂರ ಬಾ ರಸ್ತೆ, ಕಾರ್ಪೋರೇಷನ್ ವೃತ್ತ, ಬಸವನಗುಡಿ, ಮಿನರ್ವ ವೃತ್ತ, ರಾಜಭವನದ ಮುಂಭಾಗ, ಬಳ್ಳಾರಿ ರಸ್ತೆ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಗಂಟೆಗಟ್ಟಲೇ ಸವಾರರು ರಸ್ತೆಯಲ್ಲಿರಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಮಳೆಗಾಲಕ್ಕೆ ಮೊದಲೇ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ಎದುರಾಗಿವೆ.
ಪಾಲಿಕೆಯ ಅರಣ್ಯ ಘಟಕದಲ್ಲಿ ಕೇವಲ 21 ತುರ್ತು ನಿರ್ವಹಣಾ ತಂಡಗಳಿದ್ದು, ಈ ಪೈಕಿ 17 ತಂಡಗಳು ಹಗಲಿನಲ್ಲಿ ಹಾಗೂ 4 ತಂಡಗಳು ಮಾತ್ರ ರಾತ್ರಿ ವೇಳೆ ಕಾರ್ಯ ನಿರ್ವಹಿಸುತ್ತಿವೆ. ಕಳೆದೊಂದು ವಾರದಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದರೂ ಪಾಲಿಕೆ ಹೆಚ್ಚುವರಿ ತಂಡಗಳನ್ನು ನೇಮಿಸಿಕೊಳ್ಳಲು ಮುಂದಾಗಿಲ್ಲ. ಇದರಿಂದ ತಂಡಗಳು ಒಂದ ಕಡೆ ಕಾರ್ಯಾಚರಣೆಯಲ್ಲಿ ನಿರತವಾದರೆ ಮತ್ತೂಂದು ಕಡೆಯಿಂದ ಬರುವ ದೂರುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಗಲು ವೇಳೆಗಿಂತ ರಾತ್ರಿ ಹೆಚ್ಚಿನ ತಂಡಗಳು ಕಾರ್ಯ ನಿರ್ವಹಿ ಸಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.
ಅಂಡರ್ಪಾಸ್ಗಳು ಜಲಾವೃತ!
ನಗರದಲ್ಲಿ ಶುಕ್ರವಾರ ಹಾಗೂ ಶನಿವಾರ ಸುರಿದ ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ನುಗ್ಗಿ ಜನರ ನಿದ್ದೆಗೆಡಿಸಿದೆ. ಇದರೊಂದಿಗೆ ನಗರ ಕೇಂದ್ರ ಭಾಗದಲ್ಲಿರುವ ರಿಚ್ಮಂಡ್ಟೌನ್, ಕಲಾಸಿಪಾಳ್ಯ, ಬಂಬೂಬಜಾರ್, ಸಹಕಾರ ನಗರ, ಆರ್.ಕೆ.ಗಾರ್ಡನ್, ಸಂಪಂಗಿರಾಮನಗರ, ಶಾಂತಿನಗರ, ಮಡಿವಾಳ, ಕೃಪಾನಿಧಿ ಲೇಔಟ್, ಅಂಜನಾಪುರ, ಬೆಳ್ಳಂದೂರು, ವಿಜಿನಾಪುರ, ಕೆಂಪಾಪುರ, ಅರೆಕೆರೆ, ಶಾಂತಿನಗರ, ಚಿಕ್ಕಲಸಂದ್ರ, ಉತ್ತರಹಳ್ಳಿ, ಅಕ್ಷಯ ನಗರ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್ನಲ್ಲಿ ಹಲವು ತಗ್ಗು ಪ್ರದೇಶಗಳಲಿರುವ ಮನೆಗಳಿಗೆ ನೀರು ನುಗ್ಗಿದೆ. ಮಳೆನೀರು ಕಾಲುವೆಗಳು ಉಕ್ಕಿ ಹರಿದು ಅಕ್ಷಯ ನಗರ ಮತ್ತು ಬೊಮ್ಮನಹಳ್ಳಿಯ ಕೆಲ ಪ್ರದೇಶಗಳಲ್ಲಿ ಎರಡು ಮೂರು ಅಡಿಯಷ್ಟು ನೀರು ನಿಂತ ದೃಶ್ಯ ಕಂಡುಬಂದಿದೆ. ಶುಕ್ರವಾರ ಸುರಿದ ಮಳೆಗೆ ನಗರದ ಅಂಡರ್ ಪಾಸ್ ಹಾಗೂತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ