ಹೆಬ್ಬಾಳಕರ ಬಿಜೆಪಿ ಸೇರುವ ಸಾಧ್ಯತೆ: ಸವದಿ
Team Udayavani, Nov 25, 2019, 3:00 AM IST
ಅಥಣಿ: ಬೆಳಗಾವಿ ರಾಜಕಾರಣ ಬದಲಾಗಬೇಕು. ಇದು ರಾಜಕೀಯ ಧೃವೀಕರಣ ಎಂದಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಬಹುಶಃ ಅವರು ಬಿಜೆಪಿಗೆ ಬಂದರೂ ಬರಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಸ್ವಗೃಹದಲ್ಲಿ ಮಾತನಾಡಿ, ಎಲ್ಲಾದರೂ ಅವಕಾಶ ಸಿಕ್ಕರೆ ಅವರೊಂದಿಗೆ ಮಾತನಾಡುತ್ತೇನೆ. ಅವರಿಗೂ ಬಿಜೆಪಿ ಬರುವ ಇಚ್ಛೆ ಇದ್ದರೆ ನಾವು ಸ್ವಾಗತಿಸುತ್ತೇವೆ. ಇನ್ನು ಕಾಂಗ್ರೆಸ್ನಲ್ಲಿ ಅನುದಾನಕ್ಕಾಗಿ ಕೈ-ಕಾಲು ಹಿಡಿಯುವ ಸಂಸ್ಕೃತಿ ಇದೆ. ಇದರಿಂದಾಗಿಯೇ 17 ಜನ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಾರೆ ಎಂದರು.
ಇನ್ನೂ 35 ಜನ ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಖಾಲಿ ಮಾಡುತ್ತೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದು ಸರಿಯಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣ ಇದ್ದಿದ್ದರಿಂದ ಸಾಕಷ್ಟು ಶಾಸಕರು ಕಾಂಗ್ರೆಸ್ ಬಿಟ್ಟು ಬಂದಿದ್ದಾರೆ.
ಇನ್ನೂ ಕೆಲ ಶಾಸಕರು ಹೊರಗೆ ಬಂದರೂ ಬರಬಹುದು. ಅದರಲ್ಲಿ ಆಶ್ಚರ್ಯವೆನಿಲ್ಲ. ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇದೆ. ಖರ್ಗೆ ಅವರದ್ದು ಒಂದು ಗುಂಪು, ಸಿದ್ದರಾಮಯ್ಯ ಅವರದ್ದು ಮತ್ತೂಂದು, ಪರಮೇಶ್ವರ ಅವರದ್ದು ಇನ್ನೊಂದು. ಹೀಗೆ ಒಬ್ಬೊಬ್ಬರದ್ದು ಒಂದು ಗುಂಪಿನಿಂದಾಗಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ