ಲಾಕ್ ಡೌನ್ : ಮಂಗಳೂರಿನಲ್ಲೂ ಹೈ ಅಲರ್ಟ್,ಅನಗತ್ಯವಾಗಿ ಓಡಾಡಿದ್ರೆ ಪ್ರಕರಣ ದಾಖಲು: ಶಶಿಕುಮಾರ್
Team Udayavani, Apr 28, 2021, 7:36 AM IST
ಮಂಗಳೂರು : ಕೋವಿಡ್ ಸೊಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 14 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದೇ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆವರೆಗೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ 54 ಚಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಅಲ್ಲದೆ ಮೂರು ಶಿಫ್ಟ್ ಗಳಲ್ಲಿ ಪೊಲೀಸ್ ಅಧಿಕಾರಿಗಳು ಕೆಲಸ ಮಾಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಲಾಗುವುದು ಎಂದು ಶಶಿಕುಮಾರ್ ತಿಳಿಸಿದ್ದಾರೆ.
ನಿಯಮಗಳನ್ನು ಯಾರಾದರು ಉಲ್ಲಂಘನೆ ಮಾಡಿದರೆ ಅದನ್ನು ತಡೆಯಲು ಪ್ರತೀ ಠಾಣೆಯಲ್ಲಿ 2 ಸ್ಕ್ವಾರ್ಡ್ ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ ಶೇ 50 ರಷ್ಟು ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಸರ್ಕಾರ ಕೈಗೊಂಡಿರುವ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ತಿಳಿಸಿದರು.
ಮಂಗಳೂರು ನಗರದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಎಲ್ಲಾ ವಾಹನಗಳು ನಿಂತಿದ್ದವು. ಲಾಕ್ ಡೌನ್ ಗೆ ಜಿಲ್ಲೆಯ ಜನ ಸ್ಪಂದಿಸುತ್ತಿದ್ದಾರೆ. ಯಾರು ಕೂಡ ಕಾನೂನನ್ನು ಉಲ್ಲಂಘನೆ ಮಾಡಬೇಡಿ. ಅನಗತ್ಯವಾಗಿ ಓಡಾಡಿದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಎಸ್,ಪಿ ಶಶಿಕುಮಾರ್ ಎಚ್ಚರಿಗೆ ನೀಡಿದ್ದಾರೆ.