ಜಿ.ಪಂ. ತಾ.ಪಂ. ಚುನಾವಣೆ : ಶೀಘ್ರ ವೇಳಾಪಟ್ಟಿ ಪ್ರಕಟಿಸಿ: ಹೈಕೋರ್ಟ್
Team Udayavani, Aug 5, 2021, 7:45 AM IST
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಾರ್ವತ್ರಿಕ ಚುನಾವಣೆಗಳ ಸಂಬಂಧ ಶೀಘ್ರ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಎ.ಎಸ್. ಓಕಾ, ನ್ಯಾ| ಎನ್.ಎಸ್. ಸಂಜಯ್ ಗೌಡ ಅವರಿದ್ದ ಪೀಠ ಈ ಆದೇಶ ನೀಡಿದೆ. ಇದೇ ವೇಳೆ ಚುನಾವಣೆ ಮುಂದೂ ಡುವ ಸರಕಾರದ ನಿರ್ಣಯಕ್ಕೆ ಚುನಾವಣಾ ಆಯೋಗ ಬದ್ಧವಾಗಿರಬೇಕೆಂದೇನೂ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ, ವಿಚಾರಣೆಯನ್ನು ಆ. 13ಕ್ಕೆ ಮುಂದೂಡಿದೆ.
ಡಿಸೆಂಬರ್ ಅಂತ್ಯಕ್ಕೆ ಮುಂದೂಡಿಕೆ:
ಸರಕಾರದ ಪರ ವಕೀಲರು ಹಾಜರಾಗಿ, ಕೋವಿಡ್ 2ನೇ ಅಲೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಸೆಂಬರ್ ಅಂತ್ಯದವರೆಗೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಮೇ 17ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದರು. ನಿರ್ಣಯದ ದಾಖಲೆಯನ್ನು ನ್ಯಾಯಪೀಠಕ್ಕೆ ಒದಗಿಸಿದರು.
ಸರಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಚುನಾವಣೆಗಳನ್ನು ಮುಂದೂಡುವುದಕ್ಕೆ ಸರಕಾರ ಕೋವಿಡ್ ನೆಪ ಹೇಳಿದೆ. ಪ.ಬಂಗಾಲದಲ್ಲಿ ಸಾಧ್ಯವಾಗುವುದಾದರೆ ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಲ್ಲದೆ ಸಚಿವ ಸಂಪುಟದ ನಿರ್ಣಯಕ್ಕೆ ಸಮರ್ಥನೆ ನೀಡುವಂತೆ ಸರಕಾರಕ್ಕೆ ಸೂಚಿಸಿತು.
ಚು. ಆಯೋಗಕ್ಕೆ ನಿರ್ದೇಶನ :
ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾಯಿತ ಅವಧಿ ಪೂರ್ಣಗೊಂಡಿದೆ. ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಈ ಹಿಂದೆಯೇ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಆದ್ದರಿಂದ ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ