ವಕ್ಫ್ ಆಸ್ತಿ ವರದಿ: ಸರಕಾರಕ್ಕೆ ಮಾಹಿತಿ ಕೇಳಿದ ಹೈಕೋರ್ಟ್
Team Udayavani, Sep 28, 2022, 10:58 PM IST
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಕಬಳಿಕೆ ಹಾಗೂ ದುರ್ಬಳಕೆಗೆ ಸಂಬಂಧಿಸಿ ರಾಜ್ಯ ಅಲ್ಪಸಂಖ್ಯಾಕರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿದ್ದ ವಿಶೇಷ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿದ ಬಳಿಕ ಕೈಗೊಂಡ ಕ್ರಮದ ಬಗ್ಗೆ ಹಾಗೂ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕರ ಆಯೋಗ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ಬೀದರ್ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳ ವಕ್ಫ್ ಆಸ್ತಿಗಳ ಕಬಳಿಕೆ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ| ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಅಕ್ಟೋಬರ್ 20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ