ಮನೋವಿಜ್ಞಾನ ವಿಭಾಗದ 19 ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಗೆ ಹೈಕೋರ್ಟ್ ತಡೆ
Team Udayavani, Mar 11, 2022, 9:41 PM IST
ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿನ ಮನೋವಿಜ್ಞಾನ ವಿಭಾಗದ 19 ಸಹಾಯಕ ಪ್ರಾಧ್ಯಾಪಕ ಹುದ್ದೆೆಗಳ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.
ಆದರೆ, ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಒಟ್ಟು 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಸಂಬಂಧ ನಿಗದಿಯಂತೆ ಶನಿವಾರ ಮತ್ತು ಭಾನುವಾರ (ಮಾ.12 ಮತ್ತು 13ರಂದು) ನಡೆಯಲಿದೆ.
ಪ್ರಾಣಿಶಾಸ್ತ್ರ ಹಾಗೂ ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿರುವ 19 ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳೂ ಪರೀಕ್ಷೆ ಬರೆಯಬಹುದು. ಆದರೆ, ಈ 19 ಹುದ್ದೆಗಳ ತಾತ್ಕಾಲಿಕ ಪಟ್ಟಿ, ಅಂತಿಮ ಪಟ್ಟ ಪ್ರಕಟ ಸೇರಿದಂತೆ ಮುಂದಿನ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಇದನ್ನೂ ಓದಿ:ಬಿಪಿಎಲ್ ಕಾರ್ಡ್ ಹೊಂದಲು ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ: ಸೋಮಣ್ಣ
ರಾಜ್ಯದ ವಿವಿಧ ಕಾಲೇಜುಗಳಲ್ಲಿನ ಮನೋವಿಜ್ಞಾನ ವಿಭಾಗದ 19 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿದ್ದ ಕಾಲೇಜು ಶಿಕ್ಷಣ ಇಲಾಖೆಯ ಕ್ರಮ ಪ್ರಶ್ನಿಸಿ ಬೆಂಗಳೂರಿನ ಡಾ. ಎನ್. ಮೀನಾಕ್ಷಿ ಸೇರಿ 10ಕ್ಕೂ ಅಧಿಕ ಸಹಾಯಕ ಪ್ರಾಧ್ಯಾಪಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ. ನರೇಂದರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿದೆ.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಮನೋವಿಜ್ಞಾನ ವಿಷಯದಿಂದ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಷಯಗಳಿಗೆ ಪರಿವರ್ತನೆಗೊಂಡಿದ್ದ 19 ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ, ವಿಚಾರಣೆಯನ್ನು ಏ.4ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್