High Court; ನಕಲಿ ಜಾತಿಪತ್ರ: ಅಧಿಕಾರಿ ವಜಾ: ಇಂತಹ ವ್ಯಕ್ತಿಗಳಿಗೆ ದಯೆ ತೋರಲಾಗದು


Team Udayavani, Apr 13, 2024, 11:35 PM IST

High Court; ನಕಲಿ ಜಾತಿಪತ್ರ: ಅಧಿಕಾರಿ ವಜಾ: ಇಂತಹ ವ್ಯಕ್ತಿಗಳಿಗೆ ದಯೆ ತೋರಲಾಗದು

ಬೆಂಗಳೂರು: ಹಿಂದುಳಿದ ವರ್ಗಕ್ಕೆ ಸೇರಿದ್ದ ವ್ಯಕ್ತಿಯೊಬ್ಬರು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಹುದ್ದೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ನೇಮಕಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಇಂಥವರಿಗೆ ಯಾವುದೇ ದಯೆ ತೋರಿಸಬಾರದು ಎಂದು ಹೇಳಿ ಕೆಲಸದಿಂದ ವಜಾಗೊಳಿಸಿದೆ.

ಕಲಬುರಗಿಯ ಡಾ| ಗುರುದೇವ ಗೊಲ್ಲಪ್ಪ ಯಡ್ರಾಮಿ ಅವರು ಹಿಂದುಳಿದ ವರ್ಗ ಕುರುಬ ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡವಾದ ಗೊಂಡ ಸಮುದಾಯಕ್ಕೆ ಸೇರಿದ್ದೇನೆಂದು ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡಿ 1995ರಲ್ಲಿ ಆಯುಷ್‌ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದನ್ನು ಕೃಷ್ಣಮೂರ್ತಿ ನಾಯ್ಕ ಮತ್ತು ಸಿ.ಬಿ.ನಂಜರಾಜು ಎಂಬವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಮೇಲ್ಮನವಿ ಪ್ರಾಧಿಕಾರದಲ್ಲಿ ಪ್ರಶ್ನಿಸಿದ್ದರು.

ಮೇಲ್ಮನವಿ ಪ್ರಾಧಿಕಾರವು ನೇಮಕವನ್ನು ಅಸಿಂಧುಗೊಳಿಸಿದ್ದನ್ನು ಡಾ| ಗುರುದೇವ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ವಿ.ಶ್ರೀಶಾನಂದ ಅವರ ನ್ಯಾಯಪೀಠ, ನೇಮಕಾತಿಯೇ ನಕಲಿ ಜಾತಿ ಪ್ರಮಾಣ ಪತ್ರದ ಆಧಾರದಲ್ಲಿ ನಡೆದಿರುವುದರಿಂದ ಅರ್ಜಿದಾರರನ್ನು ಸೇವೆಯಿಂದ ವಜಾಗೊಳಿಸಬೇಕು. ಅವರು ಯಾವುದೇ ರೀತಿಯ ಸೇವಾ ಸವಲತ್ತು ಪಡೆಯಲು ಅರ್ಹರಲ್ಲ ಎಂದು ಆದೇಶಿಸಿದೆ.

ಅರ್ಜಿದಾರರು ಕಲಬುರಗಿಯಲ್ಲಿ ಕುರುಬ ಮತ್ತು ಗೊಂಡ ಸಮುದಾಯ ಒಂದೇ ಎಂದು ವಾದಿಸಿದ್ದಾರೆ. ಈ ವಾದದಲ್ಲಿ ಹುರುಳಿಲ್ಲ. ಅಲ್ಲದೆ ಅರ್ಜಿದಾರರು ಶಿಕ್ಷಣ ಪಡೆಯುವಾಗ ತಾವು ಹಿಂದುಳಿದ ವರ್ಗಕ್ಕೆ ಸೇರಿರುವುದಾಗಿ ತಿಳಿಸಿದ್ದಾರೆ. ಆದರೆ ಉದ್ಯೋಗ ನೇಮಕಾತಿಯ ಸಂದರ್ಭದಲ್ಲಿ ಸತ್ಯವನ್ನು ಮರೆಮಾಚಿ ನಕಲಿ ದಾಖಲೆ ಸೃಷ್ಟಿಸಿ ಉದ್ಯೋಗ ಪಡೆದಿದ್ದಾರೆ. ಈ ನಡೆಯಿಂದ ಪರಿಶಿಷ್ಟ ಪಂಗಡದ ವ್ಯಕ್ತಿಯೊಬ್ಬರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಅವಕಾಶ ನಿರಾಕರಿಸಲ್ಪಟ್ಟಿದೆ ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.