ವರ್ಗಾವಣೆ ವೈಖರಿಗೆ ಹೈಕೋರ್ಟ್ ಗರಂ
Team Udayavani, Jan 10, 2018, 7:37 AM IST
ಬೆಂಗಳೂರು: ಸೂಕ್ತ ನಿಯಮಗಳ ಅನ್ವಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವಿಚಾರ ನಿಭಾಯಿಸುವಲ್ಲಿ ರಾಜ್ಯಸರ್ಕಾರ ಸಂಪೂರ್ಣ ವಿಫಲವಾಗಿದೆ
ಎಂದು ಹೈಕೋರ್ಟ್ ಕಿಡಿಕಾರಿದೆ. ನಿಯಮಗಳನ್ನು ಪಾಲಿಸದೆ ತಮ್ಮನ್ನು ಮೂರು ಬಾರಿ ವರ್ಗಾವಣೆ ಮಾಡಿ, ಈವರೆಗೂ ನಿಯೋಜನೆಗೊಳಿಸಿಲ್ಲ ಎಂದು ಆಕ್ಷೇಪಿಸಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವರಾಜ್ ಎ. ಕಳವೆ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಯಾವಾಗಲೂ ಗೊಂದಲದ ನಿರ್ಧಾರಗಳನ್ನು ಕೈಗೊಳ್ಳುತ್ತದೆ. ಅಧಿಕಾರಿಗಳು ಕೆಎಟಿ, ಹೈಕೋರ್ಟ್ಗಳಿಗೆ ಬರುತ್ತಾರೆ. ಕೆಲಸ ಮಾಡದೆ ಸಂಬಳ ಪಡೆಯುತ್ತಿದ್ದಾರೆ. ಹಾಗಾದರೆ, ವರ್ಗಾವಣೆ ನಿಯಮಾವಳಿಗಳು ಬರಿ ತೋರಿಕೆಗೆ ಸೀಮಿತವೇ ಎಂದು ಪ್ರಶ್ನಿಸಿತು. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಸರ್ಕಾರ ಗೊಂದಲಗಳಿಲ್ಲದೆ ಆದೇಶ ಹೊರಡಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಸರ್ಕಾರ ಮಾಡುವ ಎಡವಟ್ಟುಗಳಿಂದ ವರ್ಗಾವಣೆ ವಿಚಾರ ಸಂಬಂಧಿ ಅರ್ಜಿಗಳೇ ಬರುತ್ತವೆ. ಸರ್ಕಾರದ ಆಡಳಿತ ವೈಖರಿ ತೀವ್ರ ಬೇಸರ ತರಿಸಿದೆ ಎಂದ ನ್ಯಾಯಪೀಠ, ಇದೊಂದು ಗಂಭೀರ ವಿಚಾರವಾಗಿದ್ದು ಕೂಲಂಕಷ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟು ಜ.12ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್