ಜೈಲುಗಳಲ್ಲಿ ವೈದ್ಯರ ಕೊರತೆ: ವರದಿ ಕೇಳಿದ ಹೈಕೋರ್ಟ್
Team Udayavani, Jul 13, 2022, 10:39 PM IST
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ವೈದ್ಯರು, ವೈದ್ಯಕೀಯ ಸಿಬಂದಿ ಹಾಗೂ ಮನೋರೋಗ ಚಿಕಿತ್ಸಕರ ನೇಮಕಾತಿಯ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ರಾಜ್ಯದ ಕಾರಾಗೃಹಗಳಲ್ಲಿನ ಮೂಲ ಸೌಕರ್ಯ ಕೊರತೆ ವಿಚಾರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರಕಾರದ ಪರ ವಕೀಲರು ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರ ವಕೀಲರ ಹೇಳಿಕೆ ಆಲಿಸಿದ ನ್ಯಾಯಾಧೀಶರು ರಾಜ್ಯದ ಕಾರಾಗೃಹಗಳಲ್ಲಿ ವೈದ್ಯರು, ವೈದ್ಯಕೀಯ ಸಿಬಂದಿ ಹಾಗೂ ಮನೋರೋಗ ಚಿಕಿತ್ಸಕರ ನೇಮಕಾತಿಯ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದರು.