ಹೈಕೋರ್ಟ್ ಕಲಾಪ ಯೂಟ್ಯೂಬ್ನಲ್ಲಿ ನೇರ ಪ್ರಸಾರ
Team Udayavani, Jan 17, 2022, 9:45 PM IST
ಬೆಂಗಳೂರು: ನ್ಯಾಯಾಲಯದ ಕಲಾಪಗಳನ್ನು ಯೂಟ್ಯೂಬ್ನಲ್ಲಿ ನೇರಪ್ರಸಾರ ಮಾಡುವುದಕ್ಕೆ ಸಂಬಂಧಿಸಿದ “ಕರ್ನಾಟಕ ರೂಲ್ಸ್ ಅನ್ ಲೈವ್ ಸ್ಟ್ರೀಮಿಂಗ್ ಆ್ಯಂಡ್ ರೆಕಾರ್ಡಿಂಗ್ ಆಫ್ ಕೋರ್ಟ್ ಪ್ರೊಸೀಡಿಂಗ್ಸ್’ ನಿಯಮಗಳು ಜಾರಿಗೆ ತಂದ ಬಳಿಕ ಇದೇ ಮೊದಲ ಬಾರಿಗೆ ಸೋಮವಾರ ಹೈಕೋರ್ಟ್ನಲ್ಲಿ ಪ್ರಾಯೋಗಿಕವಾಗಿ ಕಲಾಪವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲಾಯಿತು.
ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಕಲಾಪ ನಡೆಸುವ ಕೋರ್ಟ್ ಹಾಲ್-1 ಸಹಿತ ನಾಲ್ಕು ಕೋರ್ಟ್ ಹಾಲ್ಗಳ ಕಲಾಪವನ್ನು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲು ನಿಗದಿಪಡಿಸಲಾಗಿತ್ತು. ಅದರಂತೆ ಕೋರ್ಟ್ ಹಾಲ್ 1 ಮತ್ತು 3ರ ಕಲಾಪವನ್ನು ನೇರಪ್ರಸಾರ ಮಾಡಲಾಯಿತು. ಕೋರ್ಟ್ 2 ಮತ್ತು 4ರಲ್ಲಿ ತಾಂತ್ರಿಕ ಕಾರಣಗಳಿಂದ ನೇರ ಪ್ರಸಾರ ಸಾಧ್ಯವಾಗಿಲ್ಲ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಒಂದೂವರೆ ಗಂಟೆಯ ಕಲಾಪವನ್ನು ನೆರ ಪ್ರಸಾರ ಮಾಡಲಾಗಿದ್ದು, ಸುಮಾರು 2,400 ಜನ ವೀಕ್ಷಿಸಲಿದ್ದಾರೆ.
ಕರ್ನಾಟಕ ರೂಲ್ಸ್ ಅನ್ ಲೈವ್ ಸ್ಟ್ರೀಮಿಂಗ್ ಅಂಡ್ ರೆಕಾರ್ಡಿಂಗ್ ಆಫ್ ಕೋರ್ಟ್ ಪ್ರೊಸೀಡಿಂಗ್ಸ್’, ನಿಯಮಗಳನ್ನು ಸರಕಾರ 2021ರ ಡಿ.30ರಂದು ರಾಜ್ಯಪತ್ರದಲ್ಲಿ ಪ್ರಕಟಗೊಳಿಸಿತ್ತು. ಅನಂತರ ಸೋಮವಾರವೇ ಮೊದಲ ಬಾರಿಗೆ ಪ್ರಯೋಗಿಕವಾಗಿ ಹೈಕೋರ್ಟ್ ಕಲಾಪವನ್ನು ಯೂಟ್ಯೂಬ್ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕಚೇರಿ ಮಾಹಿತಿ ನೀಡಿದೆ.
ಕಾರವಾರ ವಾಣಿಜ್ಯ ಬಂದರು ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಅಭಿವೃದ್ಧಿ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ಬೈತಕೊಲ್ ಬಂದರು ನಿರಾಶ್ರಿತರ ಯಾಂತ್ರೀಕೃತ ದೋಣಿ ಮೀನುಗಾರರ ಸಹಕಾರ ಸಂಘ ನಿಯಮಿತ ಹಾಗೂ ಉತ್ತರ ಕನ್ನಡ ಜಿಲ್ಲಾ ಮೀನುಗಾರರ ಸಂಘ ಸಲ್ಲಿಸಿದ್ದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಪ್ರಾಯೋಗಿಕವಾಗಿ ಹೈಕೋರ್ಟ್ 2021ರ ಮೇ 5ರಂದು ಯೂಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಲಾಗಿತ್ತು. ಆದರೆ, ನೇರಪ್ರಸಾರಕ್ಕೆ ಸಂಬಂಧಿಸಿದ ನಿಯಮಗಳು ಜಾರಿಗೆ ಬಂದ ಮೇಲೆ ಇದೇ ಮೊದಲ ಬಾರಿಗೆ ನೇರ ಪ್ರಸಾರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ