ಜೈಲುಗಳಲ್ಲಿ ಗಾಂಜಾ, ಕೈದಿಗಳಿಗೆ ರಾಜಾತಿಥ್ಯ
ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
Team Udayavani, Feb 24, 2022, 6:35 AM IST
ಬೆಂಗಳೂರು: ರಾಜ್ಯದ ಕಾರಾಗೃಹಗಳಿಗೆ ಗಾಂಜಾ ಮತ್ತಿತರ ಮಾದಕ ವಸ್ತುಗಳು ಸರಬರಾಜಾಗುತ್ತಿರುವ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ನಗರದ ವಕೀಲ ಧರ್ಮಪಾಲ್ ಹಾಗೂ ಕೆ. ನಾರಾಯಣ ಶೆಟ್ಟಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರ ವಕೀಲ ಧರ್ಮಪಾಲ್ ವಾದ ಮಂಡಿಸಿ, ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಖುದ್ದು ಜೈಲು ಸಿಬಂದಿಯೇ ಮಾದಕ ವಸ್ತು ಪೂರೈಕೆ ಮಾಡುತ್ತಿರುವ ಆರೋಪವಿದೆ.
ಜೈಲುಗಳ ಒಳಗೆ ಸಿಸಿ ಟಿವಿ ಇಲ್ಲ. ಸೂಕ್ತ ಮೇಲ್ವಿಚಾರಣೆಯೂ ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸರಕಾರದ ಪರ ವಕೀಲರು ಮಾಧ್ಯಮ ವರದಿ ಆಧರಿಸಿ ಅರ್ಜಿ ಸಲ್ಲಿಸಲಾಗಿದೆ. ಜೈಲುಗಳ ಒಳಗೆ ಸಿಸಿ ಟಿವಿಗಳಿವೆ ಎಂದರು.
ಇದನ್ನೂ ಓದಿ:ಗಂಗೂಬಾಯಿ ಕಾಥಿಯಾವಾಡಿ ಚಿತ್ರದ ಹೆಸರು ಬದಲಿಸಲು ಸುಪ್ರೀಂ ಕೋರ್ಟ್ ಸೂಚನೆ
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜೈಲುಗಳ ಒಳಗಿನ ವಸ್ತು ಸ್ಥಿತಿ ಏನು, ಸಿಸಿ ಟಿವಿ ವ್ಯವಸ್ಥೆ ಹೇಗಿದೆ ಎನ್ನುವುದು ನಮಗೂ ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿತು. ಬಳಿಕ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ, ಗೃಹ ಸಚಿವರು, ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಬಂದೀಖಾನೆ ಡಿಜಿಪಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ
ಜೈಲುಗಳಲ್ಲಿನ ವ್ಯವಸ್ಥೆ ಸುಧಾರಣೆ ಮಾಡಲು ಸಿಸಿ ಟಿವಿ ಅಳವಡಿಸಬೇಕು. ಪೂರ್ಣಾವಧಿ ಮೇಲುಸ್ತುವಾರಿ ನಡೆಸಲು ಪ್ರತ್ಯೇಕ ವಿಚಕ್ಷಣಾ ದಳ ಸ್ಥಾಪಿಸಬೇಕು. ಮಾದಕವಸ್ತು ಪೂರೈಕೆ ಪ್ರಕರಣಗಳನ್ನು ನ್ಯಾಯಾಂಗ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ