ಅತ್ಯಾಚಾರ: ಸಂತ್ರಸ್ತೆ ಪ್ರಾಯ ನಿರ್ಧಾರಕ್ಕೆ ಶಾಲಾ ದಾಖಲಾತಿ ಪ್ರಾಮುಖ್ಯ ಹೆಚ್ಚು


Team Udayavani, Nov 8, 2022, 6:50 AM IST

ಅತ್ಯಾಚಾರ: ಸಂತ್ರಸ್ತೆ ಪ್ರಾಯ ನಿರ್ಧಾರಕ್ಕೆ ಶಾಲಾ ದಾಖಲಾತಿ ಪ್ರಾಮುಖ್ಯ ಹೆಚ್ಚು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯು ಅಪ್ರಾಪ್ತ ವಯಸ್ಕಳು ಎಂದು ನಿರ್ಧರಿಸುವ ವಿಚಾರದಲ್ಲಿ ವೈದ್ಯರು ನೀಡಿದ ವೈದ್ಯಕೀಯ ಅಭಿಪ್ರಾಯಕ್ಕಿಂತ ಶಾಲಾ ಪ್ರಾಧಿಕಾರಗಳು ವಿತರಿಸಿದ ಪ್ರಮಾಣ ಪತ್ರ ಹೆಚ್ಚು ಪ್ರಾಮುಖ್ಯ ಹೊಂದಿರುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಹದಿನೈದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಲಬುರಗಿ ಜಿಲ್ಲೆಯ ನಿವಾಸಿ ಆರೋಪಿಯನ್ನು ಖುಲಾಸೆಗೊಳಿಸಿದ ವಿಚಾರಣ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರಕಾರ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ| ಎಚ್‌.ಬಿ. ಪ್ರಭಾಕರ ಶಾಸ್ತ್ರಿ ನೇತೃತ್ವದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಲ್ಲದೆ ಆರೋಪಿಯನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಪಡಿಸಿದ ಹೈಕೋರ್ಟ್‌, ಏಳು ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಘಟನೆ ಸಂದರ್ಭ ಸಂತ್ರಸ್ತೆ ವಯಸ್ಕಳಾಗಿದ್ದಳು ಎಂದು ವೈದ್ಯರು ದೃಢೀಕರಿಸಿದ್ದರು ಎಂಬ ಆರೋಪಿಯ ವಾದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ಮೆಟ್ರಿಕ್ಯುಲೇಷನ್‌ ಅಥವಾ ಅದಕ್ಕೆ ಸಮಾನವಾದ ಪ್ರಮಾಣ ಪತ್ರ ಅಥವಾ ಶಾಲೆ, ನಗರ ಪಾಲಿಕೆ, ಪೌರಾಡಳಿತ ಪ್ರಾಧಿಕಾರ ಅಥವಾ ಪಂಚಾಯತ್‌ ನೀಡುವ ಜನನ ಪ್ರಮಾಣ ಪತ್ರ ಲಭ್ಯವಿಲ್ಲದ ಸಂದರ್ಭದಲ್ಲಿ ಸಂತ್ರಸ್ತೆ ಮಕ್ಕಳ ವಯಸ್ಸು ನಿರ್ಧರಿಸಲು ವೈದ್ಯಕೀಯ ಅಭಿಪ್ರಾಯ ಕೋರಲಾಗುತ್ತದೆ ಎಂದು ತಿಳಿಸಿದೆ.

ಏನಿದು ಪ್ರಕರಣ?: ವಿವಾಹಿತ ವ್ಯಕ್ತಿಯೊಬ್ಬ ತನ್ನದೇ ಗ್ರಾಮದ ಅಪ್ರಾಪ್ತೆಯೊಂದಿಗೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಹಾಗೂ ಘಟನೆ ಬಹಿರಂಗ ಪಡಿಸದಂತೆ ಬೆದರಿಕೆ ಹಾಕಿದ್ದ. ಸಂತ್ರಸ್ತೆ ಗರ್ಭಿಣಿಯಾದಾಗ ಘಟನೆ ಬಹಿರಂಗವಾಗಿತ್ತು. ಇದರಿಂದ ಸಂತ್ರಸ್ತೆ ಪೋಷಕರು ಅತ್ಯಾಚಾರ, ಬೆದರಿಕೆ ಮತ್ತು ಮನೆ ಅತಿಕ್ರಮ ಪ್ರವೇಶ ಆರೋಪ ಸಂಬಂಧ ದೂರು ದಾಖಲಿಸಿದ್ದರು. ಸ್ಥಳೀಯ ಪೋಕ್ಸೊ  ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಈ ಆದೇಶ ರದ್ದು ಕೋರಿ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಆರೋಪಿ ಪರ ವಕೀಲರು, ಆರೋಪಿಯು ಸಂತ್ರಸ್ತೆಯ ಸಮ್ಮತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಘಟನೆ ನಡೆದಾಗ ಸಂತ್ರಸ್ತೆ ವಯಸ್ಕಳಾಗಿದ್ದಳು. ಇನ್ನೂ ತನ್ನ ವಯಸ್ಸು 19 ವರ್ಷ ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆ ನಡೆಸಿರುವ ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿಸಿದ್ದರು.

ಸರ್ಕಾರಿ ಅಭಿಯೋಜಕರು, ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತಳಾಗಿದ್ದಳು. ಸಂತ್ರಸ್ತೆ ಸಮ್ಮತಿ ನೀಡಿದ್ದರೆ, ಅದು ಕಾನೂನಿನಡಿ ಮಾನ್ಯವಾಗುವುದಿಲ್ಲ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.