ಡಿನೋಟಿಫಿಕೇಷನ್ ಪ್ರಕರಣ: ಎಸಿಬಿಗೆ ಹೈಕೋರ್ಟ್ ನೋಟಿಸ್
Team Udayavani, Aug 23, 2017, 8:35 AM IST
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದಟಛಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಎಸಿಬಿಯ ಎಫ್ಐಆರ್ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿದ
ನ್ಯಾಯಮೂರ್ತಿ ಅರವಿಂದಕುಮಾರ್ ಬುಧವಾರಕ್ಕೆ (ಆ.23) ಮುಂದೂಡಿದರು.
ಸಜ್ಜಾಗಿ ಬಂದಿದ್ದ ವಕೀಲರು: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿರುವ ಡಿ ನೋಟಿ μಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಪರವಾಗಿ ವಾದಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಎಸಿಬಿ ಪರ ಪ್ರತಿವಾದ ಮಂಡಿಸಲು ವಿಶೇಷ ಅಭಿಯೋಜಕರಾಗಿರುವ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.
ರವಿವರ್ಮ ಕುಮಾರ್ ಸಜ್ಜಾಗಿ ಬಂದಿದ್ದರು.
ಆದರೆ, ನ್ಯಾಯಾಲಯ, ಹೆಚ್ಚಿನ ವಾದ- ಪ್ರತಿವಾದಕ್ಕೆ ಅವಕಾಶ ನೀಡದೇ ಬುಧವಾರಕ್ಕೆ ವಿಚಾರಣೆ ಮುಂದೂಡಿತು.
ಆರಂಭದಲ್ಲಿ ಸಿ.ವಿ.ನಾಗೇಶ್ ವಾದ ಮಂಡಿಸಲು ಪ್ರಾರಂಭಿಸಿ, ಯಡಿಯೂರಪ್ಪ ವಿರುದಟಛಿ ಎಸಿಬಿ ದಾಖಲಿಸಿರುವ ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು. ಈ ಬಗ್ಗೆ ನ್ಯಾಯಾಲಯ ಪ್ರತಿಕ್ರಿಯಿಸಿ ಬುಧವಾರ ಮಧ್ಯಂತರ ಮನವಿ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಿ, ಪ್ರತಿವಾದಿಯಾದ ಎಸಿಬಿಗೆ ನೋಟಿಸ್
ಜಾರಿಗೊಳಿಸಿತು.
“ಸಿಎಂ ಸೇಡಿನ ರಾಜಕಾರಣ’
ಲಿಂಗಸುಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿ ದುರ್ಬಳಕೆ ಮಾಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ದಾಖಲಾದ ದೂರಿನನ್ವಯ ಯಡಿಯೂರಪ್ಪನವರ ಮೇಲೆ ಎಸಿಬಿ ಅ ಧಿಕಾರಿಗಳು ಎಫ್ಐಆರ್ ದಾಖಲಿಸಿ ವಿಚಾರಣೆಗೆ ಆಗಮಿಸುವಂತೆ ಸಮನ್ಸ್ ನೀಡಿದ್ದಾರೆ. ಆದರೆ ನಾಲ್ಕು ವರ್ಷಗಳಲ್ಲಿ ಸಿದ್ದರಾಮಯ್ಯ ಮತ್ತು ಅವರ
ಮಗ ಯತೀಂದ್ರ ವಿರುದಟಛಿ 25 ದೂರುಗಳು ದಾಖಲಾಗಿದ್ದರೂ ಇನ್ನೂ ಯಾವುದೇ ಎಫ್ಐಆರ್ ದಾಖಲಿಸಿಲ್ಲ. ಇದಲ್ಲದೇ ಸಚಿವರು ಹಾಗೂ ಐಎಎಸ್ ಅ ಧಿಕಾರಿಗಳ ವಿರುದಟಛಿ ದೂರು ದಾಖಲಾಗಿದ್ದರೂ ಇಲ್ಲಿವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ