ಭದ್ರತೆಯೊಂದಿಗೆ ಇಂದು ಶಾಲೆ ಆರಂಭ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಎಲ್ಲೆಡೆ ಕಟ್ಟೆಚ್ಚರ ; ಪೊಲೀಸರ ನಿಗಾ

Team Udayavani, Feb 14, 2022, 7:05 AM IST

CMಭದ್ರತೆಯೊಂದಿಗೆ ಇಂದು ಶಾಲೆ ಆರಂಭ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಬೆಂಗಳೂರು: ಹಿಜಾಬ್‌-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಫೆ.9ರಿಂದ ಮುಚ್ಚಿದ್ದ 9 ಮತ್ತು 10ನೇ ತರಗತಿಗಳು ಸೋಮವಾರದಿಂದ ರಾಜ್ಯಾದ್ಯಂತ ಪುನರಾರಂಭವಾಗಲಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸರಕಾರ ಮುಂಜಾಗ್ರತ ಕ್ರಮ ಕೈಗೊಂಡಿದೆ. ದ.ಕ., ಉಡುಪಿ, ದಾವಣಗೆರೆ, ಶಿವಮೊಗ್ಗ ಮಂಡ್ಯ ಸಹಿತ  ಹಲವು ಜಿಲ್ಲೆಗಳಲ್ಲಿ ಶಾಲೆಗಳ ಸುತ್ತಮುತ್ತ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಜಾರಿಯಾಗಿದೆ. ಸೂಕ್ಷ್ಮ ಪ್ರದೇಶದಲ್ಲಿರುವ ಶಾಲೆಗಳು ಪೊಲೀಸ್‌ ಭದ್ರತೆಯೊಂದಿಗೆ ಆರಂಭವಾಗಲಿವೆ.

ಪ್ರೌಢಶಾಲೆಗಳಿಗೆ ಭದ್ರತೆ ಕಲ್ಪಿಸುವಂತೆ ಮತ್ತು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ವಸ್ತುಸ್ಥಿತಿ ತಿಳಿದುಕೊಳ್ಳುವಂತೆ  ಡಿ.ಸಿ.ಗಳು ಹಾಗೂ ಎಸ್‌ಪಿ ಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಶಾಂತಿ ಸಭೆ ನಡೆಸುವಂತೆಯೂ ನಿರ್ದೇಶನ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ರವಿವಾರ ಮಾತನಾಡಿದ ಸಿಎಂ, ಸೌಹಾರ್ದಯುತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸುವುದು ಸರಕಾರದ ಮೊದಲ ಆದ್ಯತೆಯಾಗಿದೆ. ಶಾಲೆಗಳು ಆರಂಭವಾದ ಬಳಿಕದ ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳನ್ನು ಆರಂಭಿಸಲಾಗುತ್ತದೆ ಎಂದರು.

ಶಾಂತಿ ಕದಡುವವರ ಮೇಲೆ ನಿಗಾ
ಹಿಜಾಬ್‌ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸಿದವರ ಬಗ್ಗೆ ನಿಗಾ ವಹಿಸಲಾಗುತ್ತದೆ. ಸಾಮಾಜಿಕ ತಾಣಗಳಲ್ಲಿ ಪ್ರಚೋದನೆ ನೀಡುವವರ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ  ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಶಾಲೆಗಳಿಗೆ ಹಿಜಾಬ್‌, ಕೇಸರಿ ಶಾಲು ಹಾಕಿಕೊಂಡು ಬರಬಾರದು ಎಂದು ಹೈಕೋರ್ಟ್‌  ಸ್ಪಷ್ಟವಾಗಿ ತಿಳಿಸಿದೆ. ಅದಕ್ಕೆ ಸರಕಾರವೂ ಬದ್ಧವಾಗಿದೆ. ಹೈಕೋರ್ಟ್‌ ಆದೇಶದಂತೆ ಫೆ. 14ರಂದು 9-10ನೇ ತರಗತಿ ಆರಂಭವಾಗುತ್ತವೆ ಎಂದರು. ಗಲಾಟೆ ಆಗದಂತೆ  ಪೊಲೀಸ್‌ ಇಲಾಖೆ ನಿಗಾ ವಹಿಸಿದೆ. ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ಪಥಸಂಚನ ನಡೆಸಿದ್ದಾರೆ.

ಇಂದು ವಿಚಾರಣೆ
ಹಿಜಾಬ್‌ ವಿವಾದ ಕುರಿತು ಹೈಕೋರ್ಟ್‌ನ ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ  ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ಸೋಮವಾರ  ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದುವರಿಯಲಿದೆ.

ಪಿಯು, ಪದವಿ ಆರಂಭ ಕುರಿತು ಇಂದು ಸಭೆ
ಪ್ರೌಢಶಾಲೆ ಆರಂಭವಾದ ಬಳಿಕದ  ಪರಿಸ್ಥಿತಿ ಬಗ್ಗೆ ಸೋಮವಾರ ಸಂಜೆ  ಮುಖ್ಯಮಂತ್ರಿಗಳು ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ  ಸಭೆ ನಡೆಸಲಿದ್ದಾರೆ. ಇದರಲ್ಲಿ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಲೇಜುಗಳನ್ನು ತೆರೆಯುವ ಮನಃಸ್ಥಿತಿ ಸರಕಾರದ್ದಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ದ.ಕ., ಉಡುಪಿಯಲ್ಲೂ ನಿಷೇಧಾಜ್ಞೆ
ಮಂಗಳೂರು/ ಉಡುಪಿ:  ರಾಜ್ಯ ಸರಕಾರದ ಸೂಚನೆಯಂತೆ  ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲೂ ಸೋಮವಾರ 9 ಮತ್ತು 10ನೇ ತರಗತಿಗಳು ಆರಂಭವಾಗಲಿದ್ದು, ಗರಿಷ್ಠ ಬಂದೋಬಸ್ತ್ ಮಾಡಲಾಗಿದೆ.   ದಕ್ಷಿಣ ಕನ್ನಡ ಜಿಲ್ಲಾದ್ಯಂತ ಫೆ. 14ರ ಬೆಳಗ್ಗಿನ 6ರಿಂದ ಫೆ. 19ರ ಸಂಜೆ 6ರ ತನಕ ಎಲ್ಲ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆ. 144ರ ಅನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಫೆ. 14ರಿಂದ 19ರ ವರೆಗೆ  ಎಲ್ಲ ಪ್ರೌಢಶಾಲೆಗಳ 200 ಮೀ. ಸುತ್ತಮುತ್ತ 144 ಸೆಕ್ಷನ್‌ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ತಿಳಿಸಿದ್ದಾರೆ.

ಶಾಲೆಗಳು ಸೋಮವಾರ ಪುನಃ ಆರಂಭವಾಗಲಿವೆ. ಜಿಲ್ಲಾಧಿಕಾರಿಗಳು, ಡಿಡಿಪಿಐ ಹಾಗೂ ಶಾಲಾ ಆಡಳಿತ ಮಂಡಳಿ ಗಳು ಶಾಂತಿ ಸಭೆ ನಡೆಸುವಂತೆ ಈಗಾಗಲೇ ಸೂಚಿಸಿದ್ದೇನೆ. ಶಾಲೆಗಳು ಆರಂಭವಾದ ಬಳಿಕದ ಪರಿಸ್ಥಿತಿ ಯನ್ನು ಗಮನಿಸಿ ಕಾಲೇಜುಗಳನ್ನು ಆರಂಭಿಸಲಾಗುವುದು.
– ಬಸವರಾಜ ಬೊಮ್ಮಾಯಿ,
ಮುಖ್ಯಮಂತ್ರಿ

ಹಿಜಾಬ್‌ ವಿವಾದದಲ್ಲಿ ಮುಚ್ಚಿರುವ ಶಾಲೆ ಕಾಲೇಜುಗಳನ್ನು ತೆರೆಯುವ ಮುನ್ನ ಮಕ್ಕಳ ಹಿತೃಷ್ಟಿಯಿಂದ ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅಹಿತಕರ ಘಟನೆ ಗಳಿಗೆ ಅವಕಾಶ ನೀಡಬಾರದು. ಸೂಕ್ಷ್ಮ ವಿಷಯಕ್ಕೆ ಸಂಬಂಧಿಸಿ ಸರಕಾರ ಸೂಕ್ತ ಹಾಗೂ ಬಿಗಿಕ್ರಮ ಕೈಗೊಳ್ಳಲಿ.
-ಎಚ್‌.ಡಿ. ಕುಮಾರಸ್ವಾಮಿ,
ಮಾಜಿ ಮುಖ್ಯಮಂತ್ರಿ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.