ಹಿಜಾಬ್ ಅನಗತ್ಯ ವಿವಾದ ಬಗೆಹರಿದಿದೆ: ಸಚಿವ ನಾಗೇಶ್
Team Udayavani, Mar 15, 2022, 10:45 PM IST
ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲೇ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರದ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಸರಿ ಇದೆ ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಕರ್ನಾಟಕ ಶಿಕ್ಷಣ ಕಾಯ್ದೆ ಅನುಸಾರ ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಜಾರಿಯಲ್ಲಿದೆ. ದಶಕಗಳಿಂದ ಈ ನಿಯಮವನ್ನು ಪಾಲಿಸಲಾಗುತ್ತಿದೆ. ಆದರೆ, ಮುಸ್ಲಿಂ ಮಹಿಳೆಯರ ಏಳಿಗೆ, ಸಬಲೀಕರಣ ಸಹಿಸದ ಕೆಲವು ಸಂಘಟನೆಗಳು, ವ್ಯಕ್ತಿಗಳು ಉಡುಪಿ ಕಾಲೇಜಿನ ಕೆಲ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದ್ದರು.
ಹೀಗಾಗಿ, ರಾಜ್ಯದಲ್ಲಿ ಅನಗತ್ಯ ವಿವಾದ ಸೃಷ್ಟಿಯಾಗಿತ್ತು. ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರುವಂತಹ ವಾತಾವರಣವನ್ನು ಸೃಷ್ಟಿಸಿದ್ದರು. ಸರ್ಕಾರದ ಆದೇಶದ ಕುರಿತು ಅಡ್ವೋಕೆಟ್ ಜನರಲ್ ಹಾಗೂ ಅರ್ಜಿದಾರರ ಪರ ವಕೀಲರ ವಾದವನ್ನು ಸವಿವರವಾಗಿ ಆಲಿಸಿದ ಹೈಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ ಎಂದು ಹೇಳಿದರು.
ಸಮವಸ್ತ್ರವು ಮಕ್ಕಳಲ್ಲಿ ಸಮಾನತೆ, ಭಾವೈಕ್ಯತೆ ಭಾವನೆ ಮೂಡಿಸಿ ತಾರತಮ್ಯವನ್ನು ನಿವಾರಿಸಿ ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುತ್ತದೆ. ಹೀಗಾಗಿ, ತರಗತಿಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲಿಸಬೇಕು ಎಂದರು.
ಸಮವಸ್ತ್ರ ನಿಯಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದ ಉಡುಪಿ ವಿದ್ಯಾರ್ಥಿನಿಯರ ಮನವೊಲಿಸಿ ತರಗತಿಗೆ ಹಾಜರಾಗುವಂತೆ ಮನವಿ ಮಾಡುತ್ತೇವೆ. ಯಾರೊಬ್ಬರು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ