ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ಒಂದೂವರೆ ಗಂಟೆ ಕಾಲ ವಾದ- ಪ್ರತಿವಾದ; ವಿಚಾರಣೆ ಮುಂದೂಡಿಕೆ
Team Udayavani, Feb 8, 2022, 1:29 PM IST
ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ತಾರಕ್ಕೇರಿರುವ ಹಿಜಾಬ್- ಕೇಸರಿ ಶಾಲು ವಿವಾದ ಬಗ್ಗೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ಕೈಗೆತ್ತಿಕೊಂಡಿತು. ಸುದೀರ್ಘ ವಾದ- ಪ್ರತಿವಾದ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದರು.
ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ (ಶಿರವಸ್ತ್ರ) ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಎರಡು ಪತ್ಯೇಕ ತಕರಾರು ಅರ್ಜಿಗಳ ವಿಚಾರಣೆಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ನಡೆಸಿತು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದ ಹಿಜಾಬ್- ಕೇಸರಿ ಗಲಾಟೆ: ಕಲ್ಲು ತೂರಾಟ, ಲಾಠಿ ಚಾರ್ಜ್
ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೊಸದಾಗಿ ಎರಡು ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಈ ವೇಳೆ ವಾದ ಮಂಡಿಸಿದ ಮೊಹಮ್ಮದ್ ತಾಹಿರ್, ಹಲವು ಕಾಲೇಜುಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರ ಹೊಸ ನೀತಿ ರೂಪಿಸಲಿ. ಅಲ್ಲಿಯವರೆಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಕೇಳಿದ್ದು, ಸರ್ಕಾರದ ಪರ ವಕೀಲ ಎ.ಜಿ. ಪ್ರಭುಲಿಂಗ ಈಗಾಗಲೇ ಸರ್ಕಾರ ಜಾರಿಗೊಳಿಸಿರುವ ಸಮವಸ್ತ್ರ ಕಡ್ಡಾಯ ಆದೇಶ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಅರ್ಜಿದಾರರ ಪರ ವಕೀಲ ದೇವದತ್ ಕಾಮತ್, ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆ ಎಂದು ಕುರಾನ್ ನಲ್ಲಿ ಉಲ್ಲೇಖವಿದೆ. ಆದರೆ ಸರ್ಕಾರ ವಿದ್ಯಾರ್ಥಿಗಳ ಹಕ್ಕು ಉಲ್ಲಂಘಿಸಿದೆ. ಸಂವಿಧಾನದ 19(1)A ಹಾಗೂ 21ನೇ ವಿಧಿ ಅಡಿಯಲ್ಲಿ ಇಚ್ಛೆಯ ಬಟ್ಟೆ ಧರಿಸುವ ಹಕ್ಕಿದೆ ಎಂದರು.
ವಕೀಲ ದೇವದತ್ ಕಾಮತ್, ಧಾರ್ಮಿಕ ಆಚರಣೆ, ಸರ್ಕಾರದ ನಿಯಮದ ನಡುವೆ ಗೊಂದಲವಿದ್ದಾಗ ಕೋರ್ಟ್ ಇದನ್ನು ತೀರ್ಮಾನಿಸಬೇಕು ಎಂದು ಕೇರಳ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಾರೆ. ಅಲ್ಲದೇ ಲಕ್ಷ್ಮೀಂದ್ರ ತೀರ್ಥ ಸ್ವಾಮಿಯರ್ ವರ್ಸಸ್ ರಾಜ್ಯ, ಅಮೆರಿಕಾ ಸಂವಿಧಾನ, ಹಳೆಯ ತೀರ್ಪನ್ನು ಉಲ್ಲೇಖಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ