ಪಾದಯಾತ್ರೆಗೆ ತುಮಕೂರಲ್ಲೇ ತಡೆ
Team Udayavani, Dec 11, 2019, 3:04 AM IST
ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಹಲವು ಭಾಗಗಳಿಂದ ಆಗಮಿಸಿದ್ದ ಅಂಗನ ವಾಡಿ ಕಾರ್ಯಕರ್ತೆಯರ ಬೆಂಗಳೂರು ಪಾದ ಯಾತ್ರೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ರಾಜ್ಯ ಸರ್ಕಾರ ತುಮಕೂರಿನಲ್ಲೇ ತಡೆಯೊಡ್ಡಿದೆ.
ಪಾದಯಾತ್ರೆಗೆ ಹೊರಟ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಕೋಲಾರ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತರನ್ನು ತಡೆ ಹಿಡಿಯಲಾಗಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿ ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ ಆರೋಪಿಸಿದರು.
ಕೋಲಾರ ಜಿಲ್ಲೆಯ ಮಾಲೂರಿನ ರಾಜ್ಯ ಕಾರ್ಯ ದರ್ಶಿ ನಾಗರತ್ನ ಅವರನ್ನು ಗೃಹ ಬಂಧನದ ಲ್ಲಿಟ್ಟಿದ್ದರು, ವಕೀಲರ ಮೂಲಕ ಅವರನ್ನು ಬಿಡಿಸಲಾಗಿದೆ ಎಂದರು. ಅಂಗನವಾಡಿಗಳಲ್ಲಿಯೇ ಎಲ್ಕೆಜಿ- ಯುಕೆಜಿ ಪ್ರಾರಂಭ ಸೇರಿ ಇತರೆ 13 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಾದಯಾತ್ರೆ- ಪ್ರತಿಭಟನೆಗೆ ಅನುಮತಿ ಕೊಡಬೇಕೆಂದು ನ.25 ರಂದು ಸಿಎಂ ಹಾಗೂ ಪೊಲೀಸ್ ಇಲಾಖೆಗೆ ತಿಳಿಸಿ ದಾಗ, ಮೌಖೀಕವಾಗಿ ತಿಳಿಸಿ ಈಗ, ಅನು ಮತಿ ನಿರಾಕರಿಸ ಲಾಗಿದೆ ಎಂದು ದೂರಿದರು.
ಕೊರೆಯುವ ಚಳಿಯಲ್ಲೇ ರಾತ್ರಿ ಕಳೆದರು: ಪೊಲೀಸರು ಪಾದಯಾತ್ರೆ ತಡೆದಿರುವ ಹಿನ್ನೆಲೆಯಲ್ಲಿ ತುಮಕೂರು ಅಮಾನಿಕೆರೆ ಗಾಜಿನ ಮನೆ ಬಳಿ ಅಂಗನವಾಡಿ ಕಾರ್ಯಕರ್ತೆಯರು ರಾತ್ರಿಯಿಡೀ ಪ್ರತಿಭಟನೆ ಮುಂದುವರಿಸಿದರು. ಕೊರೆಯುವ ಚಳಿಯಲ್ಲೂ ಸಾವಿರಾರು ಮಂದಿ ವಿವಿಧ ಬೇಡಿಕೆ ಈಡೇರುವವರೆಗೂ ಪ್ರತಿ ಭಟನೆ ನಿಲ್ಲಿಸು ವುದಿಲ್ಲ ಎಂದು ಪಟ್ಟು ಹಿಡಿದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ