Sex Deal :ಹಿಮಾಚಲದ ಯುವಕನಿಂದ ಉಗಾಂಡಾ ವಿದ್ಯಾರ್ಥಿನಿಯ ಹತ್ಯೆ!
Team Udayavani, Feb 2, 2017, 12:37 PM IST
ಬೆಂಗಳೂರು : ನಗರದಲ್ಲಿ ಬುಧವಾರ ರಾತ್ರಿ ವಿದೇಶಿ ವಿದ್ಯಾರ್ಥಿನಿಯೊಬ್ಬಳ ಹತ್ಯೆ ನಡೆದಿದ್ದು ಭಾರೀ ಸುದ್ದಿಯಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿ ಯ ತಿಮ್ಮೇಗೌಡ ಲೇಔಟ್ನಲ್ಲಿ ಉಗಾಂಡಾ ಮೂಲದ ವಿದ್ಯಾರ್ಥಿನಿಯನ್ನು ಹಿಮಾಚಲ ಪ್ರದೇಶ ಮೂಲದ ಯುವಕನೊಬ್ಬ ಬರ್ಬರವಾಗಿ ಇರಿದು ಹತ್ಯೆ ಮಾಡಿದ್ದಾನೆ.
ಇಶಾನ್ ಎಂಬ ಎಂ.ಟೆಕ್ ಪದವಿಧರ,ಉದ್ಯೋಗ ಅರಸಿ ಬಂದಿದ್ದ ಯುವಕನಿಗೆ ಉಗಾಂಡ ವಿದ್ಯಾರ್ಥಿನಿ ನಕಾಯಾಕಿ ಫ್ಲೋರೆನ್ಸ್ ಎಂಬಾಕೆಯೊಂದಿಗೆ ಪರಿಚಯವಾಗಿದ್ದು, ಪರಸ್ಪರ ಒಪ್ಪಿಗೆ ಯೊಂದಿಗೆ ಸೆಕ್ಸ್ ನಡೆಸಲು ಮುಂದಾಗಿದ್ದರು. ಇದಕ್ಕಾಗಿ 5000 ರೂಪಾಯಿ ನೀಡುವುದಾಗಿ ಇಶಾನ್ಡೀಲ್ ಮಾಡಿಕೊಂಡಿದ್ದ ಎನ್ನಲಾಗಿದೆ.
ಸಂಜೆ ರೂಮ್ಗೆ ಬಂದಿದ್ದ ಇಶಾನ್ ಬಳಿ ಸೆಕ್ಸ್ ನಡೆಸಬೇಕಾದರೆ 10000 ರೂಪಾಯಿ ನೀಡಬೇಕು ಎಂದು ಫ್ಲೋರೆನ್ಸ್ ಬೇಡಿಕೆ ಇಟ್ಟಿದ್ದಾಳೆ. ಈ ವೇಳೆ ಜಗಳ ನಡೆದು ಫ್ಲೋರೆನ್ಸ್ಳನ್ನು ಇರಿದು ಇಶಾನ್ ಹತ್ಯೆ ಗೈದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈಗಾಗಲೇ ಇಶಾನ್ನನ್ನು ಬಂಧಿಸಲಾಗಿದೆ.
ಇನ್ಸ್ಪೆಕ್ಟರ್ ಮೇಲೆ ದಾಳಿ ಯತ್ನ
ಕೊಲೆಯಾದ ಬಳಿಕ ತನಿಖೆಗೆ ಆಗಮಿಸಿದ ಇನ್ಸ್ಪೆಕ್ಟರ್ ಅಂಜನ್ ಕುಮಾರ್ ಎನ್ನುವವರ ಮೇಲೆ ಉಗಾಂಡಾದ ಉದ್ರಿಕ್ತ ವಿದ್ಯಾರ್ಥಿಗಳು ದಾಳಿಗೆ ಮುಂದಾದ ಬಗ್ಗೆ ವರದಿಯಾಗಿದೆ. ಸ್ಥಳದಲ್ಲಿ ಭದ್ರತೆಗಾಗಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ.
ಮೀತಿ ಮೀರಿದ ವಿದೇಶಿ ವಿದ್ಯಾರ್ಥಿಗಳ ಪುಂಡಾಟ
ಘಟನೆಯ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ನಗರದಲ್ಲಿ ವಿದೇಶಿ ವಿದ್ಯಾರ್ಥಿಗಳ ಪುಂಡಾಟ ಮೀತಿ ಮೀರಿದ್ದು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಆಬಳಿಕ ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವಿದ್ಯಾಥಿಗಳ ಶಿಕ್ಷಣಕ್ಕೆ ಕೇಂದ್ರ ಅನುಮತಿ ನೀಡಿದ್ದು ಈಗ ಪುಂಡಾಟ ಮೀತಿ ಮೀರಿದ್ದು ಇದನ್ನು ಕೇಂದ್ರದ ಗಮನಕ್ಕೆ ತರುವುದಾಗಿ ಸಚಿವ ಪರಮೇಶ್ವರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ